ಹನೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38)ಮಳ್ಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45) ಮಳವಳ್ಳಿ ತಾಲೂಕಿನ ರಾಗಿಬೋಮ್ಮನಹಳ್ಳಿ ನಾಗರಾಜು(54) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದಿಂದ ಒಡೆಯರ ಪಾಳ್ಯ ಲೊಕ್ಕನಹಳ್ಳಿ ಮಾರ್ಗವಾಗಿ ಹನೂರು ಕಡೆಗೆ ನಕ್ಷತ್ರ ಆಮೆ ರವಾನೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹನೂರಿನ ಹುಲುಸುಗುಡ್ಡೆ ಸಮೀಪ ಎಸ್ ಐ ವಿಜಯರಾಜ್ ನೇತ್ರತ್ವದ ತಂಡ ದಾಳಿ ನಡೆಸಿ 1ಕೆಜಿ 280 ಗ್ರಾಮ ತೂಕದ ಎರಡು ಜೀವಂತ ನಕ್ಷತ್ರ ಆಮೆ, ಸಾಗಾಟ ಮಾಡಲು ಬಳಸಿದ್ದ ಕೆಎ 51ಎ 3369 ಬಿಳಿ ಟಾಟಾ ಇಂಡಿಕಾ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ದಾಳಿಯಲ್ಲಿ ಎಸ್ ಐ ವಿಜಯರಾಜ್, ಮುಖ್ಯಪೇದೆಗಳಾದ ಸ್ವಾಮಿ ಶಂಕರ್, ಬಸವರಾಜ್ ಪೇದೆ ರಾಮಚಂದ್ರಸ್ವಾಮಿ, ಬಸವರಾಜು ಚಾಲಕ ಪ್ರಭಾಕರ್ ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…