ಹನೂರು : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38)ಮಳ್ಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45) ಮಳವಳ್ಳಿ ತಾಲೂಕಿನ ರಾಗಿಬೋಮ್ಮನಹಳ್ಳಿ ನಾಗರಾಜು(54) ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.
ಹನೂರು ತಾಲೂಕಿನ ಗುಂಡಿಮಾಳ ಗ್ರಾಮದಿಂದ ಒಡೆಯರ ಪಾಳ್ಯ ಲೊಕ್ಕನಹಳ್ಳಿ ಮಾರ್ಗವಾಗಿ ಹನೂರು ಕಡೆಗೆ ನಕ್ಷತ್ರ ಆಮೆ ರವಾನೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹನೂರಿನ ಹುಲುಸುಗುಡ್ಡೆ ಸಮೀಪ ಎಸ್ ಐ ವಿಜಯರಾಜ್ ನೇತ್ರತ್ವದ ತಂಡ ದಾಳಿ ನಡೆಸಿ 1ಕೆಜಿ 280 ಗ್ರಾಮ ತೂಕದ ಎರಡು ಜೀವಂತ ನಕ್ಷತ್ರ ಆಮೆ, ಸಾಗಾಟ ಮಾಡಲು ಬಳಸಿದ್ದ ಕೆಎ 51ಎ 3369 ಬಿಳಿ ಟಾಟಾ ಇಂಡಿಕಾ ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ದಾಳಿಯಲ್ಲಿ ಎಸ್ ಐ ವಿಜಯರಾಜ್, ಮುಖ್ಯಪೇದೆಗಳಾದ ಸ್ವಾಮಿ ಶಂಕರ್, ಬಸವರಾಜ್ ಪೇದೆ ರಾಮಚಂದ್ರಸ್ವಾಮಿ, ಬಸವರಾಜು ಚಾಲಕ ಪ್ರಭಾಕರ್ ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…