ಚಾಮರಾಜನಗರ

ಚಾ.ನಗರ: ಮದುವೆ ಮಂಟಪದಲ್ಲಿ ಮತದಾನ ಜಾಗೃತಿ

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಮತದಾನ ಕೇಂದ್ರಕ್ಕೆ ಮತದಾರರನ್ನು ಕರೆತರುವ ಉದ್ದೇಶದಿಂದ ಜಿಲ್ಲಾಡಳಿತ ಹಲವು ರೀತಿಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇದರ ಭಾಗವಾಗಿ ಚಾಮರಾಜನಗರದ ಮಾಂಗಲ್ಯ ಮದುವೆ ಮಂಟಪದಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವತಿಯಿಂದ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್‌ ಸಮಿತಿಯ ನೇತೃತ್ವದಲ್ಲಿ ಸ್ವೀಪ್‌ ಸಮಿತಿ ನೋಡಲ್‌ ಅಧಿಕಾರಿ ಪಿ.ಲಕ್ಷ್ಮೀ ಅವರು ನವ ವಧು-ವರರಿಗೆ ಮದುವೆ ಶುಭಾಶಯ ಕೋರುವ ಜತೆಗೆ ಆಗಮಿಸಿದ್ದ ಜನರಿಗೆ ತಪ್ಪದೇ ಮತದಾನ ಮಾಡುವಂತೆ ಪ್ಲೇಕಾರ್ಡ್‌ ಹಿಡಿದು ಜಾಗೃತಿ ಮೂಡಿಸಿದರು.

ಸಾರ್ವಜನಿಕರು ತಪ್ಪದೇ ಮತದಾನದಲ್ಲಿ ಪಾಲ್ಗೊಂಡು ಮತ ಚಲಾಯಿಸಬೇಕು ಹಾಗೂ ನನ್ನ ಮತ, ನನ್ನ ಹಕ್ಕು ಎನ್ನುವ ಪ್ಲೇಕಾರ್ಡ್‌ ಪ್ರದರ್ಶಿಸಲಾಯಿತು. ಸಮಾರಂಭದಲ್ಲಿ ಚುನಾವಣಾ ಆಯೋಗದ ನಾ ಭಾರತ ಗೀತೆಯನ್ನು ಪ್ರಸಾರ ಮಾಡಲಾಯಿತು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

5 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

6 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

6 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

6 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

6 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

7 hours ago