ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ.
ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರು 2017ರಲ್ಲಿ ಬಿ ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಮೊದಲಿಗೆ ಕೇವಲ 1 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಮುಂದುವರೆದಂತೆ ಈ ಜಾಗವನ್ನು ಸಮಾಜ ಇಲಾಖೆ ತನ್ನ ತೆಕ್ಕೆಗೆ ತೆದುಕೊಂಡು 50 ಲಕ್ಷ ರೂ ಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲು, ಉಳಿದಂತೆ ಸ್ಮಾರಕ ಕಟ್ಟಡ, ಒಳಾಂಗಣ, ಪಾರ್ಕಿಂಗ್, ಶೌಚಾಲಯ ಸೇರಿದಂತೆ ಉದ್ಯಾವನ ನಿರ್ಮಾಣ ವೆಚ್ಚ ಈವರೆಗೆ 4.87 ಕೋಟಿ ರೂ ಖರ್ಚಾಗಿದೆ.
ಸ್ಮಾರಕ ಒಳಾಂಗಣದಲ್ಲಿ ಬಿ ರಾಚಯ್ಯ ಅವರ ಜೀವನ ಚರಿತ್ರೆಯನ್ನು ಸಾರುವ ಚಿತ್ರಗಳು, ಬಿ ರಾಚಯ್ಯ ಅವರ ಬಗೆಗಿನ ಇತರೆ ಮಾಹಿತಗಳು ಒಳಗೊಂಡಿರಲಿವೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…