ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ.
ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರು 2017ರಲ್ಲಿ ಬಿ ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಮೊದಲಿಗೆ ಕೇವಲ 1 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಮುಂದುವರೆದಂತೆ ಈ ಜಾಗವನ್ನು ಸಮಾಜ ಇಲಾಖೆ ತನ್ನ ತೆಕ್ಕೆಗೆ ತೆದುಕೊಂಡು 50 ಲಕ್ಷ ರೂ ಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲು, ಉಳಿದಂತೆ ಸ್ಮಾರಕ ಕಟ್ಟಡ, ಒಳಾಂಗಣ, ಪಾರ್ಕಿಂಗ್, ಶೌಚಾಲಯ ಸೇರಿದಂತೆ ಉದ್ಯಾವನ ನಿರ್ಮಾಣ ವೆಚ್ಚ ಈವರೆಗೆ 4.87 ಕೋಟಿ ರೂ ಖರ್ಚಾಗಿದೆ.
ಸ್ಮಾರಕ ಒಳಾಂಗಣದಲ್ಲಿ ಬಿ ರಾಚಯ್ಯ ಅವರ ಜೀವನ ಚರಿತ್ರೆಯನ್ನು ಸಾರುವ ಚಿತ್ರಗಳು, ಬಿ ರಾಚಯ್ಯ ಅವರ ಬಗೆಗಿನ ಇತರೆ ಮಾಹಿತಗಳು ಒಳಗೊಂಡಿರಲಿವೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…