ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ.
ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರು 2017ರಲ್ಲಿ ಬಿ ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಮೊದಲಿಗೆ ಕೇವಲ 1 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಮುಂದುವರೆದಂತೆ ಈ ಜಾಗವನ್ನು ಸಮಾಜ ಇಲಾಖೆ ತನ್ನ ತೆಕ್ಕೆಗೆ ತೆದುಕೊಂಡು 50 ಲಕ್ಷ ರೂ ಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲು, ಉಳಿದಂತೆ ಸ್ಮಾರಕ ಕಟ್ಟಡ, ಒಳಾಂಗಣ, ಪಾರ್ಕಿಂಗ್, ಶೌಚಾಲಯ ಸೇರಿದಂತೆ ಉದ್ಯಾವನ ನಿರ್ಮಾಣ ವೆಚ್ಚ ಈವರೆಗೆ 4.87 ಕೋಟಿ ರೂ ಖರ್ಚಾಗಿದೆ.
ಸ್ಮಾರಕ ಒಳಾಂಗಣದಲ್ಲಿ ಬಿ ರಾಚಯ್ಯ ಅವರ ಜೀವನ ಚರಿತ್ರೆಯನ್ನು ಸಾರುವ ಚಿತ್ರಗಳು, ಬಿ ರಾಚಯ್ಯ ಅವರ ಬಗೆಗಿನ ಇತರೆ ಮಾಹಿತಗಳು ಒಳಗೊಂಡಿರಲಿವೆ.
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…
ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…
ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…
ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…