ಚಾಮರಾಜನಗರ

ಆಗಸ್ಟ್‌ 10ರಂದು ಆಲೂರಿನಲ್ಲಿ ಬಿ ರಾಚಯ್ಯ ಸ್ಮಾರಕ ಲೋಕಾರ್ಪಣೆ

ಚಾಮರಾಜನಗರ: ಕೇರಳದ ಮಾಜಿ ರಾಜ್ಯಪಾಲರಾದ ದಿವಂಗತ ಬಿ.ರಾಚಯ್ಯ ಅವರ ಸ್ಮಾರಕ ಲೋಕಾರ್ಪಣೆ ಇದೆ ಆಗಸ್ಟ್‌ 10 ರಂದು ಚಾಮರಾಜನಗರ ಜಿಲ್ಲೆಯ ಆಲೂರು ಗ್ರಾಮದಲ್ಲಿ ಜರುಗಲಿದೆ.

ಈ ಸ್ಮಾರಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಬಿ.ರಾಚಯ್ಯ ಅವರ ಹುಟ್ಟೂರಾದ ಆಲೂರಿನಲ್ಲಿ ಸುಮಾರು ಮೂರು ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಅವರು 2017ರಲ್ಲಿ ಬಿ ರಾಚಯ್ಯ ಅವರ ಸ್ಮಾರಕ ನಿರ್ಮಾಣಕ್ಕೆ ಎರಡು ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಮೊದಲಿಗೆ ಕೇವಲ 1 ಎಕರೆ ಜಮೀನಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿತ್ತು. ಮುಂದುವರೆದಂತೆ ಈ ಜಾಗವನ್ನು ಸಮಾಜ ಇಲಾಖೆ ತನ್ನ ತೆಕ್ಕೆಗೆ ತೆದುಕೊಂಡು 50 ಲಕ್ಷ ರೂ ಗಳಲ್ಲಿ ಸ್ಮಾರಕ ನಿರ್ಮಾಣ ಮಾಡಲು, ಉಳಿದಂತೆ ಸ್ಮಾರಕ ಕಟ್ಟಡ, ಒಳಾಂಗಣ, ಪಾರ್ಕಿಂಗ್‌, ಶೌಚಾಲಯ ಸೇರಿದಂತೆ ಉದ್ಯಾವನ ನಿರ್ಮಾಣ ವೆಚ್ಚ ಈವರೆಗೆ 4.87 ಕೋಟಿ ರೂ ಖರ್ಚಾಗಿದೆ.

ಸ್ಮಾರಕ ಒಳಾಂಗಣದಲ್ಲಿ ಬಿ ರಾಚಯ್ಯ ಅವರ ಜೀವನ ಚರಿತ್ರೆಯನ್ನು ಸಾರುವ ಚಿತ್ರಗಳು, ಬಿ ರಾಚಯ್ಯ ಅವರ ಬಗೆಗಿನ ಇತರೆ ಮಾಹಿತಗಳು ಒಳಗೊಂಡಿರಲಿವೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

1 hour ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

1 hour ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

2 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

2 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

2 hours ago