ಹನೂರು: ದೇಶದ ಅಭಿವೃದ್ದಿಗೆ ಶ್ರಮಿಸುವ ಕಾರ್ಮಿಕರ ಜೀವನ ಸುಧಾರಣೆಗಾಗಿ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರು ಹಲವು ಕಾಯ್ದೆಗಳನ್ನು ಜಾರಿ ಮಾಡಿದ್ದರು ಎಂದು ಶಾಸಕ ನರೇಂದ್ರ ಅವರು ತಿಳಿಸಿದರು.
ಹನೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಉಪಪ್ರಧಾನಿ ಡಾ.ಜಗಜೀವನ್ ರಾಂ ಅವರ 118 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಮಿಕರು ದೇಶದ ಅಭಿವೃದ್ಧಿಗೆ ಶ್ರಮಿಸುವ ಅತಿ ದೊಡ್ಡ ಆಸ್ತಿ ಎಂದು ಕಾರ್ಮಿಕರ ಜೀವನ ಸುಧಾರಣೆಗಾಗಿ ಹಲವು ಕಾಯ್ದೆಯನ್ನು ಜಾರಿಗೆ ತಂದಿದ್ದರು ಎಂದರು.
ದೇಶದ ಉಪ ಪ್ರಧಾನಿಯಾಗಿ ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿ ದೇಶದ ಇತಿಹಾಸದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ದೇಶದ ಕೃಷಿ, ಕಾನೂನು ಹಾಗೂ ಕಾರ್ಮಿಕ ಕ್ಷೇತ್ರದಲ್ಲಿ ಕ್ರಾಂತಿ ಮಾಡಿ ಹೊಸ ಇತಿಹಾಸ ನಿರ್ಮಿಸಿದ್ದರು ಎಂದರು.
ದಲಿತರನ್ನು ಜೀತ ಪದ್ಧತಿಯಿಂದ ಮುಕ್ತಗೊಳಿಸುವುದು ಬಾಬು ಜಗಜೀವನರಾಮ್ ಅವರ ಮಹಾದಾಸೆಯಾಗಿತ್ತು. ಆದ್ದರಿಂದಲೇ ಅವರು ರಾಜಕೀಯ ಪ್ರವೇಶಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುವುದರ ಜತೆಗೆ ಹರಿಜನ ಸೇವಾ ಸಂಘದ ಮೂಲಕ ದಲಿತರ ಉದ್ದಾರಕ್ಕಾಗಿ ಶ್ರಮಿಸಿದರು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಾಳ್ಯ ರಾಚಯ್ಯ, ಜಿಲ್ಲಾ ಉಪಾಧ್ಯಕ್ಷ ಸಿದ್ದರಾಜು, ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಗಿರೀಶ್, ಹರೀಶ್, ಸಂಪತ್ ಕುಮಾರ್,ಬಸವರಾಜು, ನವೀನ್, ಯುವ ಕಾಂಗ್ರೆಸ್ ಅಧ್ಯಕ್ಷ ಗುಂಡಾಪುರ ಮಾದೇಶ್, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…