Mysore
23
clear sky

Social Media

ಮಂಗಳವಾರ, 24 ಮಾರ್ಚ್ 2026
Light
Dark

ವನ್ಯಪ್ರಾಣಿಗಳ ದಾಳಿಗೆ ಮರಿ ಆನೆ ಬಲಿ

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ.

ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಖಚಿತ ಪಡಿಸಿದೆ. ಅರಣ್ಯ ಇಲಾಖೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ ಮೃತ ಹೆಣ್ಣು ಮರಿಯಾನೆಯ ಮರಣೋತ್ತರ ಪರೀಕ್ಷೆ ನಡೆಸಿದರು. ತದ ನಂತರ ಮೇಲಾಧಿಕಾರಿಗಳ ಅನುಮತಿ ಪಡೆದು ವನ್ಯಪ್ರಾಣಿಗಳ ಆಹಾರಕ್ಕೆ ಆನೆ ಮೃತದೇಹವನ್ನು ಪ್ರಕೃತಿಯಲ್ಲಿ ಬಿಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!