ಚಾಮರಾಜನಗರ

ಬಂಡೀಪುರ: ಕೊಳೆತ ಸ್ಥಿತಿಯಲ್ಲಿ ಆನೆ ಕಳೇಬರ ಪತ್ತೆ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದೆ.

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 ವರ್ಷ ವಯಸ್ಸಾಗಿದೆ. ಸತ್ತ ಆನೆಯಿಂದ 02 ದಂತಗಳನ್ನು ಬೇರ್ಪಡಿಸಿ ಇಲಾಖೆ ವಶ ಪಡಿಸಿಕೊಂಡಿದೆ. ನಂತರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಂದ್ರ ಸೂಚನೆ ಮೇರೆಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೆಬರವನ್ನು ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ.

ಕಾಡಾನೆಯು ಸ್ವಾಭಾವಿಕವಾಗಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ದೃಢಪಟ್ಟಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದ ವೇಳೆ ಕೊಳೆತೆ ವಾಸನೆ ಬಂದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಶೀಲಿಸಿದಾಗ ಆನೆಯೊಂದು ಸಾವನ್ನಪ್ಪಿರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕಾಡಾನೆಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತಿರುವುದು ಖಚಿತವಾಗಿದೆ.

andolanait

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

7 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

9 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

10 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

10 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

11 hours ago