ಚಾಮರಾಜನಗರ

ಬಂಡೀಪುರ: ಕೊಳೆತ ಸ್ಥಿತಿಯಲ್ಲಿ ಆನೆ ಕಳೇಬರ ಪತ್ತೆ

ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದೆ.

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 ವರ್ಷ ವಯಸ್ಸಾಗಿದೆ. ಸತ್ತ ಆನೆಯಿಂದ 02 ದಂತಗಳನ್ನು ಬೇರ್ಪಡಿಸಿ ಇಲಾಖೆ ವಶ ಪಡಿಸಿಕೊಂಡಿದೆ. ನಂತರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಂದ್ರ ಸೂಚನೆ ಮೇರೆಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೆಬರವನ್ನು ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ.

ಕಾಡಾನೆಯು ಸ್ವಾಭಾವಿಕವಾಗಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ದೃಢಪಟ್ಟಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದ ವೇಳೆ ಕೊಳೆತೆ ವಾಸನೆ ಬಂದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಶೀಲಿಸಿದಾಗ ಆನೆಯೊಂದು ಸಾವನ್ನಪ್ಪಿರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕಾಡಾನೆಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತಿರುವುದು ಖಚಿತವಾಗಿದೆ.

andolanait

Recent Posts

ಮುಡಾ ಡೈವರ್ಟ್‌ ಮಾಡಲು ದರ್ಶನ್‌ ಪೋಟೋ ವೈರಲ್: ಜೋಶಿ ಆರೋಪಕ್ಕೆ ಡಿ.ಕೆ ಶಿವಕುಮಾರ್ ಕೌಂಟರ್‌ ತಿರುಗೇಟು

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ…

8 hours ago

ಐಎಎಸ್‌ ಸೇವೆಯಿಂದಲೇ ಪೂಜಾ ಖೇಡ್ಕರ್‌ ವಜಾ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿವಾದಗಳ ಆರೋಪ ಹೊತ್ತಿದ್ದ ಮಾಜಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ಅವರನ್ನು ತಕ್ಷಣದಿಂದಲೇ…

8 hours ago

‘ಕೋಣ’ದ ಕಥೆಯೊಂದಿಗೆ ಬಂದ ಕೋಮಲ್

ಕೋಮಲ್‍ ಈಗಾಗಲೇ ‘ಕಾಲಾಯ ನಮಃ’, ‘ರೋಲೆಕ್ಸ್’, ‘ಎಲಾ ಕುನ್ನಿ’ ಮುಂತಾದ ಚಿತ್ರಗಳಲ್ಲಿ ನಟಿಸುತ್ತಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ.…

9 hours ago

ಮೈಸೂರು: ಬೆಳವಾಡಿ ರಾಯಲ್‌ ಬ್ರದರ್ಸ್‌ ವತಿಯಿಂದ 13ಅಡಿ ಗಣಪ ಪ್ರತಿಷ್ಠಾಪನೆ

ಮೈಸೂರು: ನಗರದಲ್ಲಿ ವಿನಾಯಕ ಚೌತಿ ಹಬ್ಬದ ಆಚರಣೆ ಚೋರಾಗಿಯೇ ನಡೆಯುತ್ತಿದೆ. ನಗರದ ಬೆಳವಾಡಿಯ ರಾಯಲ್‌ ಬ್ರದರ್ಸ್‌ ವತಿಯಿಂದ ಸತತ ಎಂಟು…

14 hours ago

ಸೆಟ್ಟೇರಿತು ರಮೇಶ್ ಅರವಿಂದ್, ಗಣೇಶ್ ಹೊಸ ಸಿನಿಮಾ …

ರಮೇಶ್‍ ಅರವಿಂದ್ ಮತ್ತು ಗಣೇಶ್‍ ಒಟ್ಟಿಗೆ ನಟಿಸುತ್ತಾರೆ ಎಂಬುದು ಕಳೆದ ವರ್ಷದ ಸುದ್ದಿ. ‘ಇನ್‍ಸ್ಪೆಕ್ಟರ್‍ ವಿಕ್ರಂ’, ‘ಮಾನ್ಸೂನ್‍ ರಾಗ’, ‘ರಂಗನಾಯಕ’…

15 hours ago

ಮಡಿಕೇರಿ: ಪೊನ್ನಂಪೇಟೆಯಲ್ಲಿ ವೈಭವ ಪೂರಿತ ಗಣೇಶ ಹಬ್ಬ

ಸಂಪೂರ್ಣ ಹೂವಿನಿಂದ ಶೃಂಗಾರಗೊಂಡ ಬಸವೇಶ್ವರ ದೇವಾಲಯ..... ಮಡಿಕೇರಿ: ಪೊನ್ನಂಪೇಟೆಯಲ್ಲಿ ಇಂದು(ಸೆ.7) ಬೆಳಿಗ್ಗೆ ಗಣೇಶನನ್ನು ಪುರದ ಬಸವೇಶ್ವರ ದೇವಸ್ಥಾನಕ್ಕೆ ಗೌರಿ ಕೆರೆಯಿಂದ…

15 hours ago