ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯದ ಓಂಕಾರ ವಲಯ ವ್ಯಾಪ್ತಿಯ ನಾಗಣಾಪುರ ಬ್ಲಾಕ್-02 ಹುಣಸೆತಾಳ ಕಂಡಿ ಅರಣ್ಯ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಗಂಡಾನೆಯೊಂದರ ಕಳೆಬರ ಪತ್ತೆಯಾಗಿರುವ ಘಟನೆ ನಡೆದಿದೆ.
ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಗಂಡಾನೆಗೆ ಸುಮಾರು 40 ರಿಂದ 45 ವರ್ಷ ವಯಸ್ಸಾಗಿದೆ. ಸತ್ತ ಆನೆಯಿಂದ 02 ದಂತಗಳನ್ನು ಬೇರ್ಪಡಿಸಿ ಇಲಾಖೆ ವಶ ಪಡಿಸಿಕೊಂಡಿದೆ. ನಂತರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರವಿಂದ್ರ ಸೂಚನೆ ಮೇರೆಗೆ ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ, ನಿಯಮಾನುಸಾರ ಕಳೆಬರವನ್ನು ಅರಣ್ಯ ಪ್ರದೇಶದಲ್ಲೇ ಬಿಡಲಾಗಿದೆ.
ಕಾಡಾನೆಯು ಸ್ವಾಭಾವಿಕವಾಗಿ ಮೃತಪಟ್ಟಿರುವುದಾಗಿ ಅರಣ್ಯಾಧಿಕಾರಿಗಳು ದೃಢಪಟ್ಟಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಉಪ ವಲಯ ಅರಣ್ಯಾಧಿಕಾರಿ ಮತ್ತು ಸಿಬ್ಬಂದಿಗಳು ಗಸ್ತು ನಡೆಸುತ್ತಿದ್ದ ವೇಳೆ ಕೊಳೆತೆ ವಾಸನೆ ಬಂದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಪರಿಶೀಲಿಸಿದಾಗ ಆನೆಯೊಂದು ಸಾವನ್ನಪ್ಪಿರುವುದು ಕಂಡುಬಂದಿದೆ. ಕೂಡಲೇ ಸಿಬ್ಬಂದಿಗಳು ಹಾಗೂ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಕಾಡಾನೆಯೊಂದು ಕೊಳೆತ ಸ್ಥಿತಿಯಲ್ಲಿ ಸತ್ತಿರುವುದು ಖಚಿತವಾಗಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…