ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.
ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ರವಿ ಕಿರಣ್ ನೇತೃತ್ವದಲ್ಲಿ ಜಮಾಯಿಸಿದ 40 ಕ್ಕೂ ಅಧಿಕ ರೈತರು ವನ್ಯಜೀವಿ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಫಾರಿ ಬೇಡ ಎಂದು ಘೋಷಣೆ ಕೂಗಿದರು. ಇದರ ಬೆನ್ನಲ್ಲೇ ಸಫಾರಿಯಿಂದ ಪ್ರವಾಸಿಗರು ಬರಲಿದ್ದು ರೆಸಾರ್ಟ್, ಹೋಂ ಸ್ಟೇ ಹಾಗೂ ಸ್ಥಳೀಯವಾಗಿ ಆರ್ಥಿಕ ಸ್ವಾವಲಂಬನೆಗೆ ಸಹಾಯಕವಾಗಲಿದೆ ಎಂದು ಸಫಾರಿ ಬೆಂಬಲಿತರು ಧರಣಿಗೆ ಮುಂದಾದರು.
ಪರಿಸ್ಥಿತಿಯನ್ನು ತಿಳಿಗಿಳಿಸಲು ಮುನ್ನೆಚ್ಚರಿಕೆ ಕ್ರಮವಾಗಿ 30 ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆದು ಬೇಗೂರು ಪೊಲೀಸ್ ಠಾಣೆಗೆ ಹಾಗೂ 20 ಕ್ಕೂ ಅಧಿಕ ಸಫಾರಿ ಬೆಂಬಲಿತರನ್ನು ವಶಕ್ಕೆ ಪಡೆದು ತೆರಕಣಾಂಬಿ ಠಾಣೆಗೆ ಕರೆದೊಯ್ಯಲಾಯಿತು.
ಸಫಾರಿ ಪುನಾರಂಭಕ್ಕೆ ಪರ ವಿರೋಧ ವ್ಯಕ್ತವಾದ ಹಿನ್ನೆಲೆ ಚಾಮರಾಜನಗರ ಪೊಲೀಸ್ ಇಲಾಖೆ ಭಾರೀ ಬಿಗಿ ಭದ್ರತೆ ಕೈಗೊಂಡಿದ್ದರು. ಇನ್ನು, ಆದೇಶ ಕೈ ಸೇರದ ಹಿನ್ನೆಲೆ ಬಂಡೀಪುರದಲ್ಲಿ ಸಫಾರಿ ಇನ್ನೂ ಆರಂಭಗೊಂಡಿಲ್ಲ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…