ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ.
ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ರವಿ ಕಿರಣ್ ನೇತೃತ್ವದಲ್ಲಿ ಜಮಾಯಿಸಿದ 40 ಕ್ಕೂ ಅಧಿಕ ರೈತರು ವನ್ಯಜೀವಿ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಸಫಾರಿ ಬೇಡ ಎಂದು ಘೋಷಣೆ ಕೂಗಿದರು. ಇದರ ಬೆನ್ನಲ್ಲೇ ಸಫಾರಿಯಿಂದ ಪ್ರವಾಸಿಗರು ಬರಲಿದ್ದು ರೆಸಾರ್ಟ್, ಹೋಂ ಸ್ಟೇ ಹಾಗೂ ಸ್ಥಳೀಯವಾಗಿ ಆರ್ಥಿಕ ಸ್ವಾವಲಂಬನೆಗೆ ಸಹಾಯಕವಾಗಲಿದೆ ಎಂದು ಸಫಾರಿ ಬೆಂಬಲಿತರು ಧರಣಿಗೆ ಮುಂದಾದರು.
ಪರಿಸ್ಥಿತಿಯನ್ನು ತಿಳಿಗಿಳಿಸಲು ಮುನ್ನೆಚ್ಚರಿಕೆ ಕ್ರಮವಾಗಿ 30 ಕ್ಕೂ ಅಧಿಕ ರೈತರನ್ನು ವಶಕ್ಕೆ ಪಡೆದು ಬೇಗೂರು ಪೊಲೀಸ್ ಠಾಣೆಗೆ ಹಾಗೂ 20 ಕ್ಕೂ ಅಧಿಕ ಸಫಾರಿ ಬೆಂಬಲಿತರನ್ನು ವಶಕ್ಕೆ ಪಡೆದು ತೆರಕಣಾಂಬಿ ಠಾಣೆಗೆ ಕರೆದೊಯ್ಯಲಾಯಿತು.
ಸಫಾರಿ ಪುನಾರಂಭಕ್ಕೆ ಪರ ವಿರೋಧ ವ್ಯಕ್ತವಾದ ಹಿನ್ನೆಲೆ ಚಾಮರಾಜನಗರ ಪೊಲೀಸ್ ಇಲಾಖೆ ಭಾರೀ ಬಿಗಿ ಭದ್ರತೆ ಕೈಗೊಂಡಿದ್ದರು. ಇನ್ನು, ಆದೇಶ ಕೈ ಸೇರದ ಹಿನ್ನೆಲೆ ಬಂಡೀಪುರದಲ್ಲಿ ಸಫಾರಿ ಇನ್ನೂ ಆರಂಭಗೊಂಡಿಲ್ಲ.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…