ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ.
ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ ಎಂದು ಎಂಬ ಹಿರಿಮೆಗೆ ಪಾತ್ರವಾಗಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ವೈಲ್ಡ್ ಲೈಫ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವೆರ್ನ್ಸೆಂಟ್ ಆ್ಯಂಡ್ ಫಾರೆಸ್ಟ್ ಸಂಸ್ಥೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಸಮೀಕ್ಷೆ ನಡೆಸುತ್ತದೆ.
ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆದಿದ್ದು, ಪ್ರಸಕ್ತ ಸಾಲಿನ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಬಾರಿ ಅತ್ಯುತ್ತಮ ವನ್ಯಧಾಮ ಎಂಬ ಪ್ರಶಸ್ತಿ ಸಂದಿದೆ.
ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…
Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…
ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…