ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಮತ್ತೊಮ್ಮೆ ‘ಅತ್ಯುತ್ತಮ ವನ್ಯಧಾಮ’ ಪ್ರಶಸ್ತಿ ಲಭಿಸಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಈ ಪ್ರಶಸ್ತಿ ಎರಡನೇ ಬಾರಿಗೆ ಒಲಿದಿದೆ.
ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಅತ್ಯುತ್ತಮ ವನ್ಯಧಾಮ ಎಂದು ಎಂಬ ಹಿರಿಮೆಗೆ ಪಾತ್ರವಾಗಿದೆ.
ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ, ವೈಲ್ಡ್ ಲೈಫ್ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಮಿನಿಸ್ಟ್ರಿ ಆಫ್ ಎನ್ವೆರ್ನ್ಸೆಂಟ್ ಆ್ಯಂಡ್ ಫಾರೆಸ್ಟ್ ಸಂಸ್ಥೆಯು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ, ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ ಕೈಗೊಂಡ ಕ್ರಮಗಳು, ಪ್ರವಾಸಿಗರು, ಶುಚಿತ್ವ, ಸಿಬ್ಬಂದಿ ಮುಂತಾದ ಅಂಶಗಳ ಮಾನದಂಡಗಳ ಪರಿಗಣಿಸಿ ಸಮೀಕ್ಷೆ ನಡೆಸುತ್ತದೆ.
ದೇಶದ 54 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಮೀಕ್ಷೆ ನಡೆದಿದ್ದು, ಪ್ರಸಕ್ತ ಸಾಲಿನ ಸಮೀಕ್ಷೆಯಲ್ಲಿ ಬಂಡೀಪುರ ಎರಡನೇ ಬಾರಿ ಅತ್ಯುತ್ತಮ ವನ್ಯಧಾಮ ಎಂಬ ಪ್ರಶಸ್ತಿ ಸಂದಿದೆ.
ಕೇರಳದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೊದಲ ಸ್ಥಾನ, ಬಂಡಿಪುರ ಎರಡನೇ ಸ್ಥಾನ ಹಾಗೂ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೂರನೇ ಸ್ಥಾನ ಲಭಿಸಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…