ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆಯೊಂದು ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.
ಜನಪ್ರಿಯ ಹುಲಿ ಸಂರಕ್ಷಿತ ಅರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿಭಿನ್ನ ಹಾಗೂ ವಿಶೇಷ ರೀತಿಯ ಚಿರತೆ ಕ್ಯಾಮರಾಗೆ ಸೆರೆಯಾಗಿದ್ದು, ಚಿರತೆಯ ಎರಡು ಕಣ್ಣುಗಳು ವಿಭಿನ್ನ ಬಣ್ಣದ್ದಾಗಿದೆ.
ಪ್ರವಾಸಿಗರ ಸಫಾರಿ ವೇಳೆ ಈ ಚಿರತೆ ಸೆರೆ ಸಿಕ್ಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಚಿರತೆಯ ಫೋಟೋ ಫುಲ್ ವೈರಲ್ ಆಗಿದೆ.
ಚಿರತೆಯ ಎರಡು ಕಣ್ಣುಗಳು ಕೂಡ ಬೇರೆ ಬಣ್ಣದ್ದಾಗಿದ್ದು, ಚಿರತೆಯ ಎಡಗಣ್ಣು ಕಂದು ಬಣ್ಣದ್ದಾಗಿದೆ. ಹಾಗೆಯೇ ಬಲಗಣ್ಣು ನೀಲಿ ಹಸಿರಿನಿಂದ ಕೂಡಿದೆ. ಭಾರತದಲ್ಲಿ ಈ ರೀತಿಯ ವಿಭಿನ್ನ ಕಣ್ಣುಗಳನ್ನು ಹೊಂದಿರುವ ಚಿರತೆ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಹುಲಿಗಳ ಸಂಖ್ಯೆಯಲ್ಲಿ ಹೆಚ್ಚಿರುವ ಬಂಡೀಪುರ ಅರಣ್ಯಕ್ಕೆ ಪ್ರವಾಸಿಗರ ಸಂಖ್ಯೆ ಕೂಡ ಜಾಸ್ತಿಯಾಗಿದ್ದು, ಬಂಡೀಪುರ ಆದಾಯದಲ್ಲಿ ಮತ್ತೆ ಹೆಚ್ಚಳ ಕಂಡು ಬಂದಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…