ಚಾಮರಾಜನಗರ

ಬಂಡೀಪುರ: ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಹುಲಿಗಳ ದರ್ಶನ

ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ.

ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು ಮರಿಗಳು ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ಪುಳಕವನ್ನುಂಟುಮಾಡಿದೆ.

ಕಳೆದ ನವೆಂಬರ್‌ನಲ್ಲಿ ಸಫಾರಿ ಬಂದ್ ಆಗಿದ್ದರಿಂದ ಯಾವುದೇ ವಾಹನಗಳ ಓಡಾಟವಿಲ್ಲದೆ ಸ್ವಚ್ಚಂದವಾಗಿದ್ದ ವನ್ಯಜೀವಿಗಳು ಸಫಾರಿ ಆರಂಭವಾದ ನಂತರ ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.

ಸೋಮವಾರ ಬೆಳಗ್ಗೆ ಸಫಾರಿ ಸಂದರ್ಭದಲ್ಲಿ ಕಿರುಬನ ಕೊಳಚಿ ಸಮೀಪ ಕೇತಳ್ಳಿ ಕೆರೆ ಫೀಮೇಲ್ ತನ್ನ ಎರಡು ಮರಿಗಳ ಜೊತೆ ಮಲಗಿರುವುದು ಹಾಗೂ ಅದೇ ಕೆರೆಯಲ್ಲಿ ನೀರು ಕುಡಿಯುತ್ತಿದ್ದ ಮೂರ್ಕೆರೆ ಫೀಮೇಲ್‌ನ ಮೂರು ಮರಿಗಳು ಕಾಡಿನತ್ತ ಓಡಿಹೋದ ವೀಡಿಯೋ ಸಖತ್ ವೈರಲ್ ಆಗುತ್ತಿದೆ.

ಕಳೆದ ವರ್ಷ ತನ್ನ ಮೂರು ಮರಿಗಳ ಜತೆಗೆ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಮೂರ್ಕೆರೆ ಫೀಮೇಲ್ ಹೆಸರಿನ ಹೆಣ್ಣುಹುಲಿ ಅಕ್ಟೋಬರ್ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು. ಎಡ ಕಾಲಿಗೆ ಆದ ಗಾಯದಿಂದ ಕುಂಟುತ್ತಿದ್ದ ತಾಯಿ ತನ್ನ ೧೦ ತಿಂಗಳ ಮರಿಗಳನ್ನು ತೊರೆದುಹೋಗಿತ್ತು. ಅರಣ್ಯ ಇಲಾಖೆ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದೆ ಅದು ಬದುಕಿದೆಯೋ ಸತ್ತಿದೆಯೇ ಎಂಬುದೇ ತಿಳಿಯದಂತಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಿಗಳ ರಕ್ಷಣೆ ಹಾಗೂ ಪಾಲನೆಗೆ ಮುಂದಾಗಿತ್ತು. ಇನ್ನೂ ಬೇಟೆಯಾಡುವ ಕೌಶಲ್ಯ ಕಲಿಯದೆ ತಮ್ಮ ಆಹಾರವನ್ನು ಸಂಪಾದಿಸಲು ಸಾಧ್ಯವಾಗದೆ ಅನಾಥವಾಗಿದ್ದ ಮರಿಗಳಿಗೆ ಆಹಾರ ನೀಡುವ ವ್ಯವಸ್ಥೆ ಮಾಡಿತ್ತು. ಜತೆಗೆ ಕಾಡಿನಲ್ಲಿರುವ ಇತರ ಹುಲಿ ಚಿರತೆಗಳಿಂದ ಅಪಾಯವಾಗದಂತೆ ಥರ್ಮಲ್ ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲಿರಿಸಿ ಸಂರಕ್ಷಿಸಿತ್ತು.
ಸದ್ಯ ಮರಿಗಳಿಗೆ ಸದ್ಯ ಒಂದೂವರೆ ವರ್ಷ ವಯಸ್ಸಾಗಿದ್ದು, ಇವು ಸ್ವಂತವಾಗಿ ಬೇಟೆಯಾಡುವ ಸಾಮರ್ಥ್ಯ ಬೆಳೆಸಿಕೊಂಡಿವೆ. ಜಿಂಕೆಗಳನ್ನು ಬೇಟೆಯಾಡಿ ತಿನ್ನುತ್ತಿವೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

13 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

13 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

13 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

14 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

14 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

14 hours ago