ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ.
ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು ಮರಿಗಳು ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ಪುಳಕವನ್ನುಂಟುಮಾಡಿದೆ.
ಕಳೆದ ನವೆಂಬರ್ನಲ್ಲಿ ಸಫಾರಿ ಬಂದ್ ಆಗಿದ್ದರಿಂದ ಯಾವುದೇ ವಾಹನಗಳ ಓಡಾಟವಿಲ್ಲದೆ ಸ್ವಚ್ಚಂದವಾಗಿದ್ದ ವನ್ಯಜೀವಿಗಳು ಸಫಾರಿ ಆರಂಭವಾದ ನಂತರ ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.
ಸೋಮವಾರ ಬೆಳಗ್ಗೆ ಸಫಾರಿ ಸಂದರ್ಭದಲ್ಲಿ ಕಿರುಬನ ಕೊಳಚಿ ಸಮೀಪ ಕೇತಳ್ಳಿ ಕೆರೆ ಫೀಮೇಲ್ ತನ್ನ ಎರಡು ಮರಿಗಳ ಜೊತೆ ಮಲಗಿರುವುದು ಹಾಗೂ ಅದೇ ಕೆರೆಯಲ್ಲಿ ನೀರು ಕುಡಿಯುತ್ತಿದ್ದ ಮೂರ್ಕೆರೆ ಫೀಮೇಲ್ನ ಮೂರು ಮರಿಗಳು ಕಾಡಿನತ್ತ ಓಡಿಹೋದ ವೀಡಿಯೋ ಸಖತ್ ವೈರಲ್ ಆಗುತ್ತಿದೆ.
ಕಳೆದ ವರ್ಷ ತನ್ನ ಮೂರು ಮರಿಗಳ ಜತೆಗೆ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಮೂರ್ಕೆರೆ ಫೀಮೇಲ್ ಹೆಸರಿನ ಹೆಣ್ಣುಹುಲಿ ಅಕ್ಟೋಬರ್ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು. ಎಡ ಕಾಲಿಗೆ ಆದ ಗಾಯದಿಂದ ಕುಂಟುತ್ತಿದ್ದ ತಾಯಿ ತನ್ನ ೧೦ ತಿಂಗಳ ಮರಿಗಳನ್ನು ತೊರೆದುಹೋಗಿತ್ತು. ಅರಣ್ಯ ಇಲಾಖೆ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದೆ ಅದು ಬದುಕಿದೆಯೋ ಸತ್ತಿದೆಯೇ ಎಂಬುದೇ ತಿಳಿಯದಂತಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಿಗಳ ರಕ್ಷಣೆ ಹಾಗೂ ಪಾಲನೆಗೆ ಮುಂದಾಗಿತ್ತು. ಇನ್ನೂ ಬೇಟೆಯಾಡುವ ಕೌಶಲ್ಯ ಕಲಿಯದೆ ತಮ್ಮ ಆಹಾರವನ್ನು ಸಂಪಾದಿಸಲು ಸಾಧ್ಯವಾಗದೆ ಅನಾಥವಾಗಿದ್ದ ಮರಿಗಳಿಗೆ ಆಹಾರ ನೀಡುವ ವ್ಯವಸ್ಥೆ ಮಾಡಿತ್ತು. ಜತೆಗೆ ಕಾಡಿನಲ್ಲಿರುವ ಇತರ ಹುಲಿ ಚಿರತೆಗಳಿಂದ ಅಪಾಯವಾಗದಂತೆ ಥರ್ಮಲ್ ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲಿರಿಸಿ ಸಂರಕ್ಷಿಸಿತ್ತು.
ಸದ್ಯ ಮರಿಗಳಿಗೆ ಸದ್ಯ ಒಂದೂವರೆ ವರ್ಷ ವಯಸ್ಸಾಗಿದ್ದು, ಇವು ಸ್ವಂತವಾಗಿ ಬೇಟೆಯಾಡುವ ಸಾಮರ್ಥ್ಯ ಬೆಳೆಸಿಕೊಂಡಿವೆ. ಜಿಂಕೆಗಳನ್ನು ಬೇಟೆಯಾಡಿ ತಿನ್ನುತ್ತಿವೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…