ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು ದೊಡ್ಡಹುಲಿ ಮತ್ತು ಐದು ಮರಿಗಳು ಕಾಣಿಸಿಕೊಂಡಿವೆ.
ಕಳೆದ ವರ್ಷ ತಾಯಿ ಕಣ್ಮರೆಯಾದ ನಂತರ ಹೊರಗೆ ಕಾಣಿಸದೆ ಕಾಡಿನೊಳಗೆ ಇದ್ದ ಮೂರು ಮರಿಗಳು ಇದೇ ಮೊದಲ ಬಾರಿಗೆ ಹೊರಗೆ ಕಾಣಿಸಿಕೊಂಡಿರುವುದು ಪ್ರವಾಸಿಗರಿಗೆ ಪುಳಕವನ್ನುಂಟುಮಾಡಿದೆ.
ಕಳೆದ ನವೆಂಬರ್ನಲ್ಲಿ ಸಫಾರಿ ಬಂದ್ ಆಗಿದ್ದರಿಂದ ಯಾವುದೇ ವಾಹನಗಳ ಓಡಾಟವಿಲ್ಲದೆ ಸ್ವಚ್ಚಂದವಾಗಿದ್ದ ವನ್ಯಜೀವಿಗಳು ಸಫಾರಿ ಆರಂಭವಾದ ನಂತರ ಪ್ರವಾಸಿಗರಿಗೆ ದರ್ಶನ ನೀಡುತ್ತಿವೆ.
ಸೋಮವಾರ ಬೆಳಗ್ಗೆ ಸಫಾರಿ ಸಂದರ್ಭದಲ್ಲಿ ಕಿರುಬನ ಕೊಳಚಿ ಸಮೀಪ ಕೇತಳ್ಳಿ ಕೆರೆ ಫೀಮೇಲ್ ತನ್ನ ಎರಡು ಮರಿಗಳ ಜೊತೆ ಮಲಗಿರುವುದು ಹಾಗೂ ಅದೇ ಕೆರೆಯಲ್ಲಿ ನೀರು ಕುಡಿಯುತ್ತಿದ್ದ ಮೂರ್ಕೆರೆ ಫೀಮೇಲ್ನ ಮೂರು ಮರಿಗಳು ಕಾಡಿನತ್ತ ಓಡಿಹೋದ ವೀಡಿಯೋ ಸಖತ್ ವೈರಲ್ ಆಗುತ್ತಿದೆ.
ಕಳೆದ ವರ್ಷ ತನ್ನ ಮೂರು ಮರಿಗಳ ಜತೆಗೆ ಪ್ರವಾಸಿಗರಿಗೆ ದರ್ಶನ ನೀಡುತ್ತಿದ್ದ ಮೂರ್ಕೆರೆ ಫೀಮೇಲ್ ಹೆಸರಿನ ಹೆಣ್ಣುಹುಲಿ ಅಕ್ಟೋಬರ್ ತಿಂಗಳಿನಲ್ಲಿ ಇದ್ದಕ್ಕಿದ್ದಂತೆ ಕಣ್ಮರೆಯಾಗಿತ್ತು. ಎಡ ಕಾಲಿಗೆ ಆದ ಗಾಯದಿಂದ ಕುಂಟುತ್ತಿದ್ದ ತಾಯಿ ತನ್ನ ೧೦ ತಿಂಗಳ ಮರಿಗಳನ್ನು ತೊರೆದುಹೋಗಿತ್ತು. ಅರಣ್ಯ ಇಲಾಖೆ ಎಷ್ಟೇ ಹುಡುಕಾಟ ನಡೆಸಿದರೂ ಪತ್ತೆಯಾಗದೆ ಅದು ಬದುಕಿದೆಯೋ ಸತ್ತಿದೆಯೇ ಎಂಬುದೇ ತಿಳಿಯದಂತಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮರಿಗಳ ರಕ್ಷಣೆ ಹಾಗೂ ಪಾಲನೆಗೆ ಮುಂದಾಗಿತ್ತು. ಇನ್ನೂ ಬೇಟೆಯಾಡುವ ಕೌಶಲ್ಯ ಕಲಿಯದೆ ತಮ್ಮ ಆಹಾರವನ್ನು ಸಂಪಾದಿಸಲು ಸಾಧ್ಯವಾಗದೆ ಅನಾಥವಾಗಿದ್ದ ಮರಿಗಳಿಗೆ ಆಹಾರ ನೀಡುವ ವ್ಯವಸ್ಥೆ ಮಾಡಿತ್ತು. ಜತೆಗೆ ಕಾಡಿನಲ್ಲಿರುವ ಇತರ ಹುಲಿ ಚಿರತೆಗಳಿಂದ ಅಪಾಯವಾಗದಂತೆ ಥರ್ಮಲ್ ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲಿರಿಸಿ ಸಂರಕ್ಷಿಸಿತ್ತು.
ಸದ್ಯ ಮರಿಗಳಿಗೆ ಸದ್ಯ ಒಂದೂವರೆ ವರ್ಷ ವಯಸ್ಸಾಗಿದ್ದು, ಇವು ಸ್ವಂತವಾಗಿ ಬೇಟೆಯಾಡುವ ಸಾಮರ್ಥ್ಯ ಬೆಳೆಸಿಕೊಂಡಿವೆ. ಜಿಂಕೆಗಳನ್ನು ಬೇಟೆಯಾಡಿ ತಿನ್ನುತ್ತಿವೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…