ಗುಂಡ್ಲುಪೇಟೆ: ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಗುಂಡ್ಲುಪೇಟೆಯಲ್ಲಿಂದು ಅದ್ಧೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಮಾಡಲಾಯಿತು.
ಜೆಎಸ್ಎಸ್ ಕಾಲೇಜು ಆವರಣದಲ್ಲಿ ಅಲಂಕೃತ ವಾಹನದಲ್ಲಿ ಇರಿಸಿದ್ದ ಬಸವೇಶ್ವರರ ಭಾವಚಿತ್ರಕ್ಕೆ ಸೋಮಹಳ್ಳಿ ವೀರಸಿಂಹಾಸನ ಶಿಲಾ ಮಠಾಧ್ಯಕ್ಷರಾದ ಶ್ರೀ ಸಿದ್ದಮಲ್ಲಪ್ಪ ಸ್ವಾಮೀಜಿ ಪುಷ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.
ಈ ವೇಳೆ ಶಾಸಕ ಗಣೇಶ್ ಪ್ರಸಾದ್, ಮಾಜಿ ಶಾಸಕ ನಿರಂಜನ್ ಕುಮಾರ್, ಮಹಾಸಭಾ ತಾಲ್ಲೂಕು ಅಧ್ಯಕ್ಷ ರವಿ ಕಮರಹಳ್ಳಿ ಸೇರಿದಂತೆ ಹಲವು ಭಾಗಿಯಾಗಿದ್ದರು.
ಬಳಿಕ ಹಲವಾರು ಜಾನಪದ ಕಲಾತಂಡಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆಯಲ್ಲಿ ಯುವಕರು ಹಾಗೂ ಮುಖಂಡರು ಹಾಡಿಗೆ ನೃತ್ಯ ಮಾಡಿದರು. ಬಳಿಕ ಸೋಮೇಶ್ವರ ವಿದ್ಯಾರ್ಥಿನಿಲಯದಲ್ಲಿ ಸುಮಾರು 15 ಸಾವಿರ ಜನರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಮಾಡಲಾಗಿತ್ತು.
ನಂಜನಗೂಡು : ಮುಜರಾಯಿ ಇಲಾಖೆ ಅದೀನದಲ್ಲಿರುವ ಸುಬ್ರಹ್ಮಣ್ಯದಲ್ಲಿ 1 ಬಕೆಟ್ ನೀರಿಗೆ 5 ರೂ. ಆದರೆ, ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ…
ಎಚ್. ಡಿ. ಕೋಟೆ : ರೈತರು ತಮ್ಮ ಜಮೀನುಗಳಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಲು ಮಾರಾಟದ ಅಂಗಡಿಗಳಲ್ಲಿ ಬಿತ್ತನೆ ಬೀಜ…
ಮೈಸೂರು : ನಗರದ ಜನ ವಸತಿ ಹಾಗೂ ಕೈಗಾರಿಕಾ ಪ್ರದೇಶವಾಗಿರುವ ಮೇಟಗಳ್ಳಿ ಬಡಾವಣೆಯು ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಾವು-ಚೇಳುಗಳ ಆವಾಸ ಸ್ಥಾನವಾಗಿ…
ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು,…
ವಾಷಿಂಗ್ಟನ್ : ಇವತ್ತಿನ ರಾತ್ರಿ ಇರಾನ್ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…