ಕೊಳ್ಳೇಗಾಲ : ೧೨ನೇ ಶತಮಾನದಲ್ಲಿ ಬಸವಣ್ಣನವರು ಸವಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಜೆಎಸ್ಎಸ್ ಕಾಲೇಜಿನ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜೆಎಸ್ಎಸ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ‘ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ’ ಸಮಾರಂಭ ಏರ್ಪಡಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಅವರು, ೧೨ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದರು.
ಅದರಲ್ಲೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಬಸವಣ್ಣರವರ ಆಶೋತ್ತರದಂತೆ ಇಂದು ನಮ್ಮ ಕರ್ನಾಟಕ ರಾಜ್ಯ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಒಪ್ಪಿಕೊಂಡು ಇವರ ಆಶಯದಂತೆ ಮಹಿಳೆಯರಿಗೆ ಶೇ.೩೩ ಮೀಸಲಾತಿಯನ್ನು ಸರ್ಕಾರ ನೀಡಿದೆ. ಈ ಮೂಲಕ ಆಡಳಿತ ಹಾಗೂ ರಾಜಕೀಯದಲ್ಲಿ ಮಹಿಳೆಯರು ಮುಂದೆ ಬರಲು ಸಾಧ್ಯವಾಗಿದೆ ಎಂದರು.
ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದು ತೇರ್ಗಡೆ ಹೊಂದಿ ಉನ್ನತ ಅಧಿಕಾರಿಗದಳಾಗುವ ಗುರಿಯನ್ನು ಹೊಂದಿರಬೇಕು ಎಂದು ತಿಳಿಸಿದರು.
ಜೆಎಸ್ಎಸ್ ಕಾಲೇಜು ಪ್ರಾಂಶುಪಾಲರಾದ ಮಹದೇವಸ್ವಾಮಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲ್ಲೂಕು ಕಸಾಪ ಅಧ್ಯಕ್ಷ ಎಸ್.ನಾಗರಾಜು ಕೊಂಗರಹಳ್ಳಿ, ಕಾರ್ಯದರ್ಶಿ ಸಿ.ನಾಗರಾಜು, ಬಂಡಳ್ಳಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಮುತ್ತುರಾಜ್, ಜೆಎಸ್ಎಸ್ ಮುಖ್ಯಸ್ಥರಾದ ಮಮತ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…