ಚಾಮರಾಜನಗರ

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹುಬ್ಬೆ ಹುಣಸೆ ಕೆರೆಯಲ್ಲಿ ಹೂಳು ತೆಗೆಯಲು ಬಳಸುತ್ತಿರುವ ಎರಡು ಹಿಟಾಚಿ ವಾಹನಗಳನ್ನು ಸಂಜೆ ವೇಳೆಗೆ ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ಪ್ರತಿದಿನ ನಿಲ್ಲಿಸಲಾಗುತ್ತಿತ್ತು. ಬೆಳಗ್ಗೆ ವಾಹನವನ್ನು ಹಿಟಾಚಿ ವಾಹನದ ಮಾಲೀಕರಾದ ಅಂಬರೀಶ್ ಹಾಗೂ ಅಪ್ಪ ದೊರೆ ಪರಿಶೀಲನೆ ನಡೆಸಿದಾಗ, ವಾಹನಗಳ ಬ್ಯಾಟರಿ, ಡೀಸೆಲ್ ಮತ್ತು ಬೆಲೆಬಾಳುವ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳರು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ವಾಹನ ಮಾಲೀಕರು ತಕ್ಷಣ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಅಪರಾಧ ವಿಭಾಗದ ಸಬ್‌ಇನ್ಸ್ಪೆಕ್ಟರ್ ರವಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

3 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

4 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

7 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

21 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

22 hours ago