ಚಾಮರಾಜನಗರ

ಕಾಂಗ್ರೆಸ್ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ: ಡಾ.ಅಸ್ಕರ್ ಅಲಿ

ಚಾಮರಾಜನಗರ: ಗುಂಡ್ಲುಪೇಟೆಯ ನಾಲ್ಕು ಪುರಸಭಾ ಸದಸ್ಯರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಿನ್ನೆಲೆಯಲ್ಲಿ ಅವರ ಮನೆಯ ಮುಂದೆ ಪ್ರತಿಭಟಿಸುವಾಗ ಬಿಜೆಪಿಯ ಮಾಜಿ ಶಾಸಕರಾದ ನಿರಂಜನ್ ಕುಮಾರ್ ರವರು ಕಾಂಗ್ರೆಸ್ ರವರಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ ಎನ್ನುವ ಹೇಳಿಕೆ ನೀಡಿದ್ದು ಇದಕ್ಕೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಡಾ.ಅಸ್ಕರ್ ಅಲಿ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಕಳೆದ ಹತ್ತು ವರ್ಷಗಳಲ್ಲಿ ಬಿಜೆಪಿ ಪಕ್ಷವು ದೇಶಾದ್ಯಂತ ಕಾಂಗ್ರೆಸ್ ನ 207 ಶಾಸಕರನ್ನು ಒಳಗೊಂಡಂತೆ, ವಿವಿಧ ಪಕ್ಷಗಳ 335 ಎಂಎಲ್ಎಗಳನ್ನು ಖರೀದಿಸಿ ಕರ್ನಾಟಕ, ಮಹಾರಾಷ್ಟ್ರ, ಮಧ್ಯ ಪ್ರದೇಶ, ಬಿಹಾರ ಸೇರಿದಂತೆ ಸುಮಾರು ಹತ್ತಕ್ಕೂ ಹೆಚ್ಚು ರಾಜ್ಯದ ಚುನಾಯಿತ ಸರ್ಕಾರಗಳನ್ನು ಕೆಡವಿದೆ. ಹಾಗಾಗಿ ಪಕ್ಷಾಂತದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. 17 ಶಾಸಕರನ್ನು ಪಕ್ಷಾಂತರ ಮಾಡಿಸಿ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿತ್ತು ಹಾಗೂ ಅದೇ ಸರ್ಕಾರದಲ್ಲಿ ತಾವು ನಿಗಮವೊoದರ ಅಧ್ಯಕ್ಷರಾಗಿ ಅಧಿಕಾರ ಅನುಭವಿಸುವಾಗ ನಿಮಗೆ ಯಾಕೆ ಸಂವಿಧಾನದ ನೆನಪಾಗಲಿಲ್ಲ. ಅನಂತ್ ಕುಮಾರ್ ಹೆಗಡೆ ರವರು ಪದೇಪದೇ ಸಂವಿಧಾನದ ಬದಲಾವಣೆಯ ಬಗ್ಗೆ ಮಾತನಾಡುತ್ತಿದ್ದಾಗ ಸುಮ್ಮನಿದ್ದ ನೀವು ಈಗ ಏಕಾಏಕಿ ಸಂವಿಧಾನದ ಬಗ್ಗೆ ಕಾಂಗ್ರೆಸ್ಸಿಗರಿಗೆ ಪಾಠ ಮಾಡುತ್ತಿರುವುದು ಯಾಕೆ ಎಂದು ಪ್ರಶ್ನಿಸಿದರು.

ಪ್ರತಿಭಟನೆಯ ವೇಳೆ, ಎಲ್ಲಾ ಪಕ್ಷಗಳಿಗೂ ತಲಾ ಎರಡೆರಡು ಬಾರಿ ರೌಂಡ್ ಹೊಡೆದವರನ್ನು ಎಡಬಲದಲ್ಲಿ ಕೂರಿಸಿಕೊಂಡು ಪಕ್ಷಾಂತರದ ಬಗ್ಗೆ ಮಾಜಿ ಶಾಸಕರು ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ವ್ಯಂಗ್ಯ ವಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago