bear attacked a man who had gone out
ಹನೂರು: ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯೋರ್ವರ ಮೇಲೆ ಕರಡಿ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡಿರುವ ಘಟನೆ ಜರುಗಿದೆ.
ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೇರಟ್ಟಿ ಗ್ರಾಮದ ವೀರಪ್ಪ ಎಂಬುವವರೇ ಕರಡಿ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡವರಾಗಿದ್ದಾರೆ.
ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಗೆ ಬರುವ ಗೇರಟ್ಟಿ ಗ್ರಾಮದ ವೀರಪ್ಪ ಜಮೀನಿನ ಕಡೆ ಬಹಿರ್ದೆಸೆಗೆ ತೆರಳಿದ್ದರು. ಈ ವೇಳೆ ಏಕಾಏಕಿ ಕರಡಿ ದಾಳಿ ಮಾಡಿದೆ. ಪರಿಣಾಮ ಕಾಲು ತೊಡೆ ಭಾಗಕ್ಕೆ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ತಮ್ಮ ಇಲಾಖೆಯ ವಾಹನದಲ್ಲಿ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಚಿಕಿತ್ಸೆ ಕೊಡಿಸಿದ ನಂತರ ವೀರಪ್ಪ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…
ಬಿಆರ್ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…
ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…