ಚಾಮರಾಜನಗರ

ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಶ್ರಮವಿದೆ: ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ವಿಶ್ವಕರ್ಮರು ಈ ನೆಲದ ದೇವರ ಸೃಷ್ಟಿಕರ್ತರು. ಯಾವುದೇ ದೇವಸ್ಥಾನಗಳಾಗಲಿ, ಐತಿಹಾಸಿಕ ಸ್ಥಳಗಳಾಗಲಿ, ಮತ್ತಿತರ ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ ಎಂದು ಶಾಸಕ ಎಂಆರ್ ಮಂಜುನಾಥ್ ಬಣ್ಣಿಸಿದ್ದಾರೆ.

ಈ ಬಗ್ಗೆ ಹನೂರು ಪಟ್ಟಣದ ಲೋಕೋಪಯೋಗಿ ವಸತಿ ಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವಕರ್ಮ ಸಮಾಜಕ್ಕೆ ಮತ್ತು ಅವರ ವೃತ್ತಿಗೆ ದೇಶದಲ್ಲಿಯೇ ಗೌರವ ಸಿಗುವಂತಹ ಕೆಲಸವನ್ನು ವಿಶ್ವಕರ್ಮರು ಮಾಡಿದ್ದಾರೆ. ಜನಸಾಮಾನ್ಯರ ಯಾವುದೇ ದಿನಬಳಕೆಯ ವಸ್ತುಗಳ ಹಿಂದೆ ವಿಶ್ವಕರ್ಮರ ತ್ಯಾಗವಿದೆ. ಈ ನಿಟ್ಟಿನಲ್ಲಿ ಈ ಸಮಾಜವನ್ನು ಗೌರವದಿಂದ ಕಾಣಬೇಕು ಎಂದರು.

ವೇದ ಪುರಾಣಗಳಲ್ಲಿ ವಿಶ್ವಕರ್ಮರನ್ನು ಕಲೆ ವಾಸ್ತುಶಿಲ್ಪದ ಸೃಷ್ಟಿಕರ್ತ ಎಂದು ಬಣ್ಣಿಸಲಾಗಿದೆ. ಹಾಗಾಗಿ ವಿಶ್ವಕರ್ಮ ಸಮುದಾಯ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ. ಪ್ರತಿಯೊಬ್ಬರು ವಿಶ್ವಕರ್ಮರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಮುದಾಯ ಭವನಕ್ಕೆ ಹೆಚ್ಚಿನ ಅನುದಾನ: ಹನೂರು ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ ವಿಶ್ವಕರ್ಮ ಸಮುದಾಯ ಭವನ ಕಾಮಗಾರಿ ಪೂರ್ಣಗೊಳ್ಳಲು ಹೆಚ್ಚಿನ ಅನುದಾನ ನೀಡುವಂತೆ ಸಮುದಾಯದವರು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಮುಂದಿನ ವರ್ಷದೊಳಗೆ ಉದ್ಘಾಟನೆ ಮಾಡಲು ಕ್ರಮವಹಿಸುತ್ತೇನೆ. ವಿಶ್ವಕರ್ಮ ಸಮುದಾಯಕ್ಕೆ ನಿಗಮದಿಂದ ಹೆಚ್ಚಿನ ಅನುದಾನ ಕೊಡಿಸಲಾಗುವುದು. ಇದಲ್ಲದೆ ಸಮುದಾಯದ ಕೆಲಸ ಕಾರ್ಯಗಳು ನೆನೆಗುದಿಗೆ ಬಿದ್ದಿದ್ದರೆ, ಅದರ ಮಾಹಿತಿಯನ್ನು ಕೊಡಿ. ಅವುಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಸಮುದಾಯದವರು ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನ ಕೇಳಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸಲು ಬದ್ದನಾಗಿದ್ದೇನೆ ಎಂದರು.

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಬಾನು, ಸದಸ್ಯರಾದ ಮಹೇಶ್ ನಾಯ್ಕ, ಗ್ರೇಡ್ ೨ ತಹಸಿಲ್ದಾರ್ ಡಾ. ಧನಂಜಯ್ ಇಒ ಉಮೇಶ್, ಮುಖ್ಯಾಧಿಕಾರಿ ಅಶೋಕ್ ಆರ್, ಸಿರಸ್ತೆದಾರ್ ನಾಗೇಂದ್ರ, ಅಬಕಾರಿ ಸಬ್ ಇನ್ಸ್ಪೆಕ್ಟರ್ ಸಿದ್ದಯ್ಯ, ಕಂದಾಯ ನಿರೀಕ್ಷಕ ಶೇಷಣ್ಣ ಗ್ರಾಮ ಆಡಳಿತಾಧಿಕಾರಿಗಳಾದ ಕಾವ್ಯ, ಮುಖಂಡರಾದ ರಂಗದಮಾಚಾರ್ ಮುತ್ತುರಾಜು, ಶ್ರೀನಿವಾಸ್ ಮೂರ್ತಿ, ನಾಗಣ್ಣ ಆಚಾರ್ ನಾಗೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

5 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

7 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

9 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

10 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

13 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

13 hours ago