ಚಾಮರಾಜನಗರ

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಬೇಧಿಸಲು ಬೆಲ್ಜಿಯಂ ಮಾಲಿನಾಯ್ಸ್ ಶ್ವಾನಗಳಿಗೆ ಒಂದು ವರ್ಷ ಕಾಲ ಯಶಸ್ವಿ ತರಬೇತಿ ನೀಡಲಾಗಿದ್ದು ಮೊದಲ ತಂಡದ ಶ್ವಾನಗಳನ್ನು ರಾಜ್ಯದ ಐದು ಹುಲಿಸಂರಕ್ಷಿತ ಪ್ರದೇಶಗಳಿಗೆ ನಿಯೋಜಿಸಲಾಗುತ್ತಿದೆ

ಅರಣ್ಯಗಳಲ್ಲಿ ಕಳ್ಳಬೇಟೆ, ಮರಗಳ್ಳತನ, ದಂತಕ್ಕಾಗಿ ಆನೆಗಳ ಬೇಟೆ, ಅರಣ್ಯ ಸಂಪತ್ತು ಕಳ್ಳಸಾಗಾಣಿಕೆ ಮತ್ತಿತರ ಅಪರಾಧ ಕೃತ್ಯಗಳನ್ನು‌ ತಡೆಗಟ್ಟಲು ಹಾಗು ಇಂತಹ ಅಪರಾಧ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಗೆ ತನ್ನದೆ ಆದ ಶ್ವಾನದಳದ ಅವಶ್ಯಕತೆಯಿತ್ತು. ಇದಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ವರ್ಷ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು.

ಸದ್ಯ ಹತ್ತು ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳಿಗೆ ಇಲ್ಲಿ ಕಠಿಣ ತರಬೇತಿ ನೀಡಲಾಗಿದೆ. ಈ ತಳಿಯ ನಾಯಿಗಳು ಮಾದಕವಸ್ತು, ಬಾಂಬ್, ಅನಿಲ ಸೋರಿಕೆ ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ಪತ್ತೆ ಹಚ್ಚುವಲ್ಲಿ ಪರಿಣಿತಿ ಹೊಂದಿವೆ. ಹಾಗಾಗಿ ಈ ತಳಿಯ ನಾಯಿಗಳನ್ನು ತಂದು ಅರಣ್ಯ ಅಪರಾಧಗಳನ್ನು ತಡೆಗಟ್ಟುವ ಹಾಗು ಭೇದಿಸುವ ಬಗ್ಗೆ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿದೆ. ಈ ಶ್ವಾನಗಳ ಪಾಲನೆ ಪೋಷಣೆಗೆ ಒಂದು ಶ್ವಾನಕ್ಕೆ ಇಬ್ಬರು ಹ್ಯಾಂಡ್ಲರ್‌ಗಳಂತೆ ಇಪ್ಪತ್ತು ಸಿಬ್ಬಂದಿಯನ್ನು ‌ನಿಯೋಜಿಸಿ ಅವರಿಗೂ ಸಹ ತರಬೇತಿ ಕೊಡಲಾಗಿದೆ

ಇನ್ನೂ ಹುಲಿ, ಚಿರತೆ, ಕಾಡಮ್ಮೆ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ‌ಪ್ರಾಣಿಗಳ ಮೂಳೆ, ಚರ್ಮ ಉಗುರು, ಆನೆ ದಂತ, ವನ್ಯಪ್ರಾಣಿಗಳ ಆವಯವ ಪತ್ತೆ ಹಚ್ಚುವುದು, ಶ್ರೀಗಂಧ, ರಕ್ತಚಂದನ ಮತ್ತಿತರ ಅರಣ್ಯಸಂಪತ್ತು ಪತ್ತೆ ಹಚ್ಚುವುದರ ಬಗ್ಗೆ ಈ ಶ್ವಾನಗಳಿಗೆ ತರಬೇತಿ ನೀಡಲಾಗಿದೆ. 10 ತಿಂಗಳ ಕಾಲ ತರಬೇತಿ ನೀಡಿದ್ದು ಈಗ ಈ ಶ್ವಾನಗಳನ್ನು ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗು ಭೇದಿಸಲು ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಹಾಗು ಬಿಆರ್‌ಟಿ ಹುಲಿ ಸಂರಕ್ಷಿತ ‌ಪ್ರದೇಶಗಳಿಗೆ ತಲಾ ಎರಡು ಶ್ವಾನಗಳಂತೆ ನಿಯೋಜಿಸಲಾಗಿದೆ.

ನಿಪುಣತೆ ಹಾಗು ಚಾಕಚಕ್ಯತೆಗೆ ಹೆಸರಾಗಿರುವ ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳು ಇದೀಗಾ ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿವೆ. ಇದರೊಂದಿಗೆ ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ ಜೊತೆಗೆ ಈ ಶ್ವಾನಬಲವು ದೊರಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

10 mins ago

ಇರಾನ್‌-ಇಸ್ರೇಲ್‌ ಸಂಘರ್ಷ ಎಫೆಕ್ಟ್:‌ ನೀರಾವರಿ ಪೈಪ್‌ಗಳ ಬೆಲೆಯಲ್ಲೂ ಏರಿಕೆ

ಮೈಸೂರು: ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…

27 mins ago

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಡಿಜಿಟಲ್‌ ಅರೆಸ್ಟ್‌ ಪ್ರಕರಣ: ಎಚ್ಚೆತ್ತುಕೊಳ್ಳದ ಜನತೆ

ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್‌ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…

38 mins ago

ವಾಟಾಳ್‌ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…

1 hour ago

ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್‌ ಸ್ಟಾಕ್‌ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…

2 hours ago

ನಾಲ್ಕೈದು ದಿನಗಳ ನಂತರ ಎಲ್‌ಪಿಜಿ ಗ್ಯಾಸ್‌ ಸಿಲಿಂಡರ್‌ ಪೂರೈಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…

3 hours ago