ಚಾಮರಾಜನಗರ

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಬೇಧಿಸಲು ಬೆಲ್ಜಿಯಂ ಮಾಲಿನಾಯ್ಸ್ ಶ್ವಾನಗಳಿಗೆ ಒಂದು ವರ್ಷ ಕಾಲ ಯಶಸ್ವಿ ತರಬೇತಿ ನೀಡಲಾಗಿದ್ದು ಮೊದಲ ತಂಡದ ಶ್ವಾನಗಳನ್ನು ರಾಜ್ಯದ ಐದು ಹುಲಿಸಂರಕ್ಷಿತ ಪ್ರದೇಶಗಳಿಗೆ ನಿಯೋಜಿಸಲಾಗುತ್ತಿದೆ

ಅರಣ್ಯಗಳಲ್ಲಿ ಕಳ್ಳಬೇಟೆ, ಮರಗಳ್ಳತನ, ದಂತಕ್ಕಾಗಿ ಆನೆಗಳ ಬೇಟೆ, ಅರಣ್ಯ ಸಂಪತ್ತು ಕಳ್ಳಸಾಗಾಣಿಕೆ ಮತ್ತಿತರ ಅಪರಾಧ ಕೃತ್ಯಗಳನ್ನು‌ ತಡೆಗಟ್ಟಲು ಹಾಗು ಇಂತಹ ಅಪರಾಧ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಗೆ ತನ್ನದೆ ಆದ ಶ್ವಾನದಳದ ಅವಶ್ಯಕತೆಯಿತ್ತು. ಇದಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ವರ್ಷ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು.

ಸದ್ಯ ಹತ್ತು ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳಿಗೆ ಇಲ್ಲಿ ಕಠಿಣ ತರಬೇತಿ ನೀಡಲಾಗಿದೆ. ಈ ತಳಿಯ ನಾಯಿಗಳು ಮಾದಕವಸ್ತು, ಬಾಂಬ್, ಅನಿಲ ಸೋರಿಕೆ ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ಪತ್ತೆ ಹಚ್ಚುವಲ್ಲಿ ಪರಿಣಿತಿ ಹೊಂದಿವೆ. ಹಾಗಾಗಿ ಈ ತಳಿಯ ನಾಯಿಗಳನ್ನು ತಂದು ಅರಣ್ಯ ಅಪರಾಧಗಳನ್ನು ತಡೆಗಟ್ಟುವ ಹಾಗು ಭೇದಿಸುವ ಬಗ್ಗೆ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿದೆ. ಈ ಶ್ವಾನಗಳ ಪಾಲನೆ ಪೋಷಣೆಗೆ ಒಂದು ಶ್ವಾನಕ್ಕೆ ಇಬ್ಬರು ಹ್ಯಾಂಡ್ಲರ್‌ಗಳಂತೆ ಇಪ್ಪತ್ತು ಸಿಬ್ಬಂದಿಯನ್ನು ‌ನಿಯೋಜಿಸಿ ಅವರಿಗೂ ಸಹ ತರಬೇತಿ ಕೊಡಲಾಗಿದೆ

ಇನ್ನೂ ಹುಲಿ, ಚಿರತೆ, ಕಾಡಮ್ಮೆ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ‌ಪ್ರಾಣಿಗಳ ಮೂಳೆ, ಚರ್ಮ ಉಗುರು, ಆನೆ ದಂತ, ವನ್ಯಪ್ರಾಣಿಗಳ ಆವಯವ ಪತ್ತೆ ಹಚ್ಚುವುದು, ಶ್ರೀಗಂಧ, ರಕ್ತಚಂದನ ಮತ್ತಿತರ ಅರಣ್ಯಸಂಪತ್ತು ಪತ್ತೆ ಹಚ್ಚುವುದರ ಬಗ್ಗೆ ಈ ಶ್ವಾನಗಳಿಗೆ ತರಬೇತಿ ನೀಡಲಾಗಿದೆ. 10 ತಿಂಗಳ ಕಾಲ ತರಬೇತಿ ನೀಡಿದ್ದು ಈಗ ಈ ಶ್ವಾನಗಳನ್ನು ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗು ಭೇದಿಸಲು ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಹಾಗು ಬಿಆರ್‌ಟಿ ಹುಲಿ ಸಂರಕ್ಷಿತ ‌ಪ್ರದೇಶಗಳಿಗೆ ತಲಾ ಎರಡು ಶ್ವಾನಗಳಂತೆ ನಿಯೋಜಿಸಲಾಗಿದೆ.

ನಿಪುಣತೆ ಹಾಗು ಚಾಕಚಕ್ಯತೆಗೆ ಹೆಸರಾಗಿರುವ ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳು ಇದೀಗಾ ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿವೆ. ಇದರೊಂದಿಗೆ ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ ಜೊತೆಗೆ ಈ ಶ್ವಾನಬಲವು ದೊರಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

4 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

5 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

7 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

7 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

12 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

14 hours ago