ಚಾಮರಾಜನಗರ

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಬೇಧಿಸಲು ಬೆಲ್ಜಿಯಂ ಮಾಲಿನಾಯ್ಸ್ ಶ್ವಾನಗಳಿಗೆ ಒಂದು ವರ್ಷ ಕಾಲ ಯಶಸ್ವಿ ತರಬೇತಿ ನೀಡಲಾಗಿದ್ದು ಮೊದಲ ತಂಡದ ಶ್ವಾನಗಳನ್ನು ರಾಜ್ಯದ ಐದು ಹುಲಿಸಂರಕ್ಷಿತ ಪ್ರದೇಶಗಳಿಗೆ ನಿಯೋಜಿಸಲಾಗುತ್ತಿದೆ

ಅರಣ್ಯಗಳಲ್ಲಿ ಕಳ್ಳಬೇಟೆ, ಮರಗಳ್ಳತನ, ದಂತಕ್ಕಾಗಿ ಆನೆಗಳ ಬೇಟೆ, ಅರಣ್ಯ ಸಂಪತ್ತು ಕಳ್ಳಸಾಗಾಣಿಕೆ ಮತ್ತಿತರ ಅಪರಾಧ ಕೃತ್ಯಗಳನ್ನು‌ ತಡೆಗಟ್ಟಲು ಹಾಗು ಇಂತಹ ಅಪರಾಧ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಗೆ ತನ್ನದೆ ಆದ ಶ್ವಾನದಳದ ಅವಶ್ಯಕತೆಯಿತ್ತು. ಇದಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ವರ್ಷ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು.

ಸದ್ಯ ಹತ್ತು ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳಿಗೆ ಇಲ್ಲಿ ಕಠಿಣ ತರಬೇತಿ ನೀಡಲಾಗಿದೆ. ಈ ತಳಿಯ ನಾಯಿಗಳು ಮಾದಕವಸ್ತು, ಬಾಂಬ್, ಅನಿಲ ಸೋರಿಕೆ ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ಪತ್ತೆ ಹಚ್ಚುವಲ್ಲಿ ಪರಿಣಿತಿ ಹೊಂದಿವೆ. ಹಾಗಾಗಿ ಈ ತಳಿಯ ನಾಯಿಗಳನ್ನು ತಂದು ಅರಣ್ಯ ಅಪರಾಧಗಳನ್ನು ತಡೆಗಟ್ಟುವ ಹಾಗು ಭೇದಿಸುವ ಬಗ್ಗೆ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿದೆ. ಈ ಶ್ವಾನಗಳ ಪಾಲನೆ ಪೋಷಣೆಗೆ ಒಂದು ಶ್ವಾನಕ್ಕೆ ಇಬ್ಬರು ಹ್ಯಾಂಡ್ಲರ್‌ಗಳಂತೆ ಇಪ್ಪತ್ತು ಸಿಬ್ಬಂದಿಯನ್ನು ‌ನಿಯೋಜಿಸಿ ಅವರಿಗೂ ಸಹ ತರಬೇತಿ ಕೊಡಲಾಗಿದೆ

ಇನ್ನೂ ಹುಲಿ, ಚಿರತೆ, ಕಾಡಮ್ಮೆ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ‌ಪ್ರಾಣಿಗಳ ಮೂಳೆ, ಚರ್ಮ ಉಗುರು, ಆನೆ ದಂತ, ವನ್ಯಪ್ರಾಣಿಗಳ ಆವಯವ ಪತ್ತೆ ಹಚ್ಚುವುದು, ಶ್ರೀಗಂಧ, ರಕ್ತಚಂದನ ಮತ್ತಿತರ ಅರಣ್ಯಸಂಪತ್ತು ಪತ್ತೆ ಹಚ್ಚುವುದರ ಬಗ್ಗೆ ಈ ಶ್ವಾನಗಳಿಗೆ ತರಬೇತಿ ನೀಡಲಾಗಿದೆ. 10 ತಿಂಗಳ ಕಾಲ ತರಬೇತಿ ನೀಡಿದ್ದು ಈಗ ಈ ಶ್ವಾನಗಳನ್ನು ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗು ಭೇದಿಸಲು ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಹಾಗು ಬಿಆರ್‌ಟಿ ಹುಲಿ ಸಂರಕ್ಷಿತ ‌ಪ್ರದೇಶಗಳಿಗೆ ತಲಾ ಎರಡು ಶ್ವಾನಗಳಂತೆ ನಿಯೋಜಿಸಲಾಗಿದೆ.

ನಿಪುಣತೆ ಹಾಗು ಚಾಕಚಕ್ಯತೆಗೆ ಹೆಸರಾಗಿರುವ ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳು ಇದೀಗಾ ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿವೆ. ಇದರೊಂದಿಗೆ ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ ಜೊತೆಗೆ ಈ ಶ್ವಾನಬಲವು ದೊರಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 mins ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

6 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

9 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

9 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

12 hours ago