ಚಾಮರಾಜನಗರ

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು. ಅರಣ್ಯ ಅಪರಾಧಗಳನ್ನು ಬೇಧಿಸಲು ಬೆಲ್ಜಿಯಂ ಮಾಲಿನಾಯ್ಸ್ ಶ್ವಾನಗಳಿಗೆ ಒಂದು ವರ್ಷ ಕಾಲ ಯಶಸ್ವಿ ತರಬೇತಿ ನೀಡಲಾಗಿದ್ದು ಮೊದಲ ತಂಡದ ಶ್ವಾನಗಳನ್ನು ರಾಜ್ಯದ ಐದು ಹುಲಿಸಂರಕ್ಷಿತ ಪ್ರದೇಶಗಳಿಗೆ ನಿಯೋಜಿಸಲಾಗುತ್ತಿದೆ

ಅರಣ್ಯಗಳಲ್ಲಿ ಕಳ್ಳಬೇಟೆ, ಮರಗಳ್ಳತನ, ದಂತಕ್ಕಾಗಿ ಆನೆಗಳ ಬೇಟೆ, ಅರಣ್ಯ ಸಂಪತ್ತು ಕಳ್ಳಸಾಗಾಣಿಕೆ ಮತ್ತಿತರ ಅಪರಾಧ ಕೃತ್ಯಗಳನ್ನು‌ ತಡೆಗಟ್ಟಲು ಹಾಗು ಇಂತಹ ಅಪರಾಧ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆಗೆ ತನ್ನದೆ ಆದ ಶ್ವಾನದಳದ ಅವಶ್ಯಕತೆಯಿತ್ತು. ಇದಕ್ಕಾಗಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಳೆದ ವರ್ಷ ದೇಶದಲ್ಲೇ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರ ಆರಂಭಿಸಲಾಗಿತ್ತು.

ಸದ್ಯ ಹತ್ತು ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳಿಗೆ ಇಲ್ಲಿ ಕಠಿಣ ತರಬೇತಿ ನೀಡಲಾಗಿದೆ. ಈ ತಳಿಯ ನಾಯಿಗಳು ಮಾದಕವಸ್ತು, ಬಾಂಬ್, ಅನಿಲ ಸೋರಿಕೆ ಸೇರಿದಂತೆ ಯಾವುದೇ ಅಪರಾಧ ಕೃತ್ಯಗಳನ್ನು ಪತ್ತೆ ಮಾಡುವಲ್ಲಿ ಪತ್ತೆ ಹಚ್ಚುವಲ್ಲಿ ಪರಿಣಿತಿ ಹೊಂದಿವೆ. ಹಾಗಾಗಿ ಈ ತಳಿಯ ನಾಯಿಗಳನ್ನು ತಂದು ಅರಣ್ಯ ಅಪರಾಧಗಳನ್ನು ತಡೆಗಟ್ಟುವ ಹಾಗು ಭೇದಿಸುವ ಬಗ್ಗೆ ನುರಿತ ತಜ್ಞರಿಂದ ತರಬೇತಿ ಕೊಡಿಸಲಾಗಿದೆ. ಈ ಶ್ವಾನಗಳ ಪಾಲನೆ ಪೋಷಣೆಗೆ ಒಂದು ಶ್ವಾನಕ್ಕೆ ಇಬ್ಬರು ಹ್ಯಾಂಡ್ಲರ್‌ಗಳಂತೆ ಇಪ್ಪತ್ತು ಸಿಬ್ಬಂದಿಯನ್ನು ‌ನಿಯೋಜಿಸಿ ಅವರಿಗೂ ಸಹ ತರಬೇತಿ ಕೊಡಲಾಗಿದೆ

ಇನ್ನೂ ಹುಲಿ, ಚಿರತೆ, ಕಾಡಮ್ಮೆ ಸೇರಿದಂತೆ ಅಳಿವಿನ ಅಂಚಿನಲ್ಲಿರುವ ‌ಪ್ರಾಣಿಗಳ ಮೂಳೆ, ಚರ್ಮ ಉಗುರು, ಆನೆ ದಂತ, ವನ್ಯಪ್ರಾಣಿಗಳ ಆವಯವ ಪತ್ತೆ ಹಚ್ಚುವುದು, ಶ್ರೀಗಂಧ, ರಕ್ತಚಂದನ ಮತ್ತಿತರ ಅರಣ್ಯಸಂಪತ್ತು ಪತ್ತೆ ಹಚ್ಚುವುದರ ಬಗ್ಗೆ ಈ ಶ್ವಾನಗಳಿಗೆ ತರಬೇತಿ ನೀಡಲಾಗಿದೆ. 10 ತಿಂಗಳ ಕಾಲ ತರಬೇತಿ ನೀಡಿದ್ದು ಈಗ ಈ ಶ್ವಾನಗಳನ್ನು ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗು ಭೇದಿಸಲು ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಹಾಗು ಬಿಆರ್‌ಟಿ ಹುಲಿ ಸಂರಕ್ಷಿತ ‌ಪ್ರದೇಶಗಳಿಗೆ ತಲಾ ಎರಡು ಶ್ವಾನಗಳಂತೆ ನಿಯೋಜಿಸಲಾಗಿದೆ.

ನಿಪುಣತೆ ಹಾಗು ಚಾಕಚಕ್ಯತೆಗೆ ಹೆಸರಾಗಿರುವ ಬೆಲ್ಜಿಯಂ ಮಾಲಿನಾಯ್ಸ್ ತಳಿಯ ಶ್ವಾನಗಳು ಇದೀಗಾ ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿವೆ. ಇದರೊಂದಿಗೆ ಅರಣ್ಯ ಸಂರಕ್ಷಣೆಗೆ ಸಿಬ್ಬಂದಿ ಜೊತೆಗೆ ಈ ಶ್ವಾನಬಲವು ದೊರಕಿದಂತಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

12 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

12 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

12 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago