ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಮಾರ್ಚ್ 10ರಿಂದ 12ರ ಬೆಳ್ಳಿಗ್ಗೆ 6 ರವರೆಗೆ ಹನೂರು ಪಟ್ಟಣದಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಚಾಮರಾಜನಗರ ಜಿಲ್ಲಾ ಪೊಲೀಸ್ ಅಧೀಕ್ಷಕರ ಮನವಿಯ ಮೇರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶ್ರೀರೂಪ ಅವರು ಈ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಅಬಕಾರಿ ಕಾಯಿದೆ 1965ರ ಕಲಂ 21(1)ರಡಿ ನೀಡಿರುವ ಅಧಿಕಾರವನ್ನು ಬಳಸಿಕೊಂಡು, ಮಾರ್ಚ್ 10ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 12ರ ಬೆಳಿಗ್ಗೆ 6 ಗಂಟೆಯವರೆಗೆ ಹನೂರು ಪಟ್ಟಣ ಹಾಗೂ ಅದರ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಇರುವ ಎಲ್ಲಾ ರೀತಿಯ ಮದ್ಯದಂಗಡಿಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ರೀತಿಯ ಮದ್ಯ ಮಾರಾಟ, ಅಕ್ರಮ ಸಾಗಾಣಿಕೆ ಹಾಗೂ ಅಕ್ರಮ ದಾಸ್ತಾನು ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತದ ವತಿಯಿಂದ ಹೊರಡಿಸಿರುವ ಪ್ರಕಟಣೆಯಲ್ಲಿ ತಿಳಿಸಿದೆ.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…