ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ “ಭೀಮ ಸಂಭ್ರಮ ಕಪ್ ಸೀಜನ್- 05” ಕ್ರಿಕೆಟ್ ಪಂದ್ಯಾವಳಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕ ಎ ಆರ್ ಕೃಷ್ಣಮೂರ್ತಿ ಅವರು, ಆಟಗಾರರಿಗೆ ಶುಭ ಕೋರಿದರು. ಈ ವೇಳೆ ಬಾಲ್ಯದಲ್ಲಿ ಆಟ ಆಡಿದ ಬಗ್ಗೆ ಮೆಲುಕು ಹಾಕಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ವಿ. ಚಂದ್ರು, ಬ್ಲಾಕ್ ಕಾಂಗ್ರೆಸ್ನ ಅಧ್ಯಕ್ಷ ತೋಟೇಶ್, ಜಿಲ್ಲಾ ಕಾಂಗ್ರೆಸ್ನ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.





