ಚಾಮರಾಜನಗರ

ಲಾರಿಗೆ ಬೈಕ್‌ ಡಿಕ್ಕಿ : ಸವಾರ ಸಾವು

ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ಅರೇಪುರ ಗೇಟ್ ಮತ್ತು ನಿರ್ಮಾಣ ಹಂತದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಕೇರಳದ ಕಲ್ಪೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬೈಕ್ ಸವಾರ ಲಾರಿಯನ್ನು ಹಿಂದಿಕ್ಕುವ ಸಂದರ್ಭದಲ್ಲಿ ಲಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ನಡೆದಿದೆ.

ಮಹಮ್ಮದ್ ರಫಿಕ್ (೨೩) ಮೃತಪಟ್ಟ ಬೈಕ್ ಸವಾರ. ಅಪಘಾತವಾದ ಬಳಿಕ ಬೈಕ್‌ಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ರಸ್ತೆಯಲ್ಲಿ ಅಪಘಾತವಾಗಿರುವುದನ್ನು ಗಮನಿಸಿ ಗಾಬರಿಗೊಂಡ ಮೈಸೂರು ಕಡೆಯಿಂದ ಬಂದ ತವೆರಾ ಕಾರು ಚಾಲಕ ರಸ್ತೆ ಪಕ್ಕಕ್ಕೆ ಕಾರು ತಿರುಗಿಸಿ ಕಲ್ಲು ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಜಖಂ ಗೊಂಡಿದೆ. ಕಾರಿನಲ್ಲಿದ್ದವರಿಗೆ ಅಪಾಯವಾಗಿಲ್ಲ. ಬೇಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀರಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರತ-ರಷ್ಯಾ ನಡುವೆ ಹಲವು ಒಪ್ಪಂದಗಳಿಗೆ ಸಹಿ

ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…

20 mins ago

ವಾಚ್‌ ವಿಚಾರವಾಗಿ ಸುಳ್ಳು ಹೇಳಿದ್ದರೆ ಇಂದೇ ರಾಜೀನಾಮೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…

25 mins ago

ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ: ಸಚಿವ ದಿನೇಶ್‌ ಗುಂಡೂರಾವ್‌

ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.…

1 hour ago

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

1 hour ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

2 hours ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

2 hours ago