ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಪೋಷಕರೊಡನೆ ತೆರಳುತ್ತಿದ್ದ ನಾಲ್ಕೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಂಡೇಗಾಲ ಗ್ರಾಮದ ಹರ್ಷಿತಾ ನಾಯಕ ಮೃತಪಟ್ಟ ಮಗು. ಬೈಕ್ನಲ್ಲಿದ್ದ ಈಕೆಯ ತಂದೆ ನಂಜುಂಡಸ್ವಾಮಿ ಹಾಗೂ ತಾಯಿ ಕಾವ್ಯ ಗಾಯಗೊಂಡಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಂತರ ಪರಾರಿಯಾಗಿರುವ ಟ್ರಾಕ್ಟರ್ ಪತ್ತೆಗೆ ಕ್ರಮ ಜರುಗಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಭೇಟಿ ನೀಡಿ, ಮಹಜರ್ ನಡೆಸಿದರು. ಈ ಸಂದರ್ಭದಲ್ಲಿ ಎಸ್ಐ ಕರಿಬಸಪ್ಪ ಹಾಜರಿದ್ದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…