ಕೊಳ್ಳೇಗಾಲ : ತಾಲ್ಲೂಕಿನ ಚಿಲಕವಾಡಿ ಗ್ರಾಮದ ರಸ್ತೆಯಲ್ಲಿ ಬುಧವಾರ ಬೆಳಗಿನ ಜಾವ ನಸುಕಿನಲ್ಲಿ ನಿಂತಿದ್ದ ಟ್ರಾಕ್ಟರ್ಗೆ ಗುಂಡೇಗಾಲದಿಂದ ಮೈಸೂರು ಕಡೆಗೆ ಹೋಗುತ್ತಿದ್ದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಪೋಷಕರೊಡನೆ ತೆರಳುತ್ತಿದ್ದ ನಾಲ್ಕೂವರೆ ವರ್ಷದ ಹೆಣ್ಣು ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ.
ಗುಂಡೇಗಾಲ ಗ್ರಾಮದ ಹರ್ಷಿತಾ ನಾಯಕ ಮೃತಪಟ್ಟ ಮಗು. ಬೈಕ್ನಲ್ಲಿದ್ದ ಈಕೆಯ ತಂದೆ ನಂಜುಂಡಸ್ವಾಮಿ ಹಾಗೂ ತಾಯಿ ಕಾವ್ಯ ಗಾಯಗೊಂಡಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ನಂತರ ಪರಾರಿಯಾಗಿರುವ ಟ್ರಾಕ್ಟರ್ ಪತ್ತೆಗೆ ಕ್ರಮ ಜರುಗಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಭೇಟಿ ನೀಡಿ, ಮಹಜರ್ ನಡೆಸಿದರು. ಈ ಸಂದರ್ಭದಲ್ಲಿ ಎಸ್ಐ ಕರಿಬಸಪ್ಪ ಹಾಜರಿದ್ದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…