ಚಾಮರಾಜನಗರ: ಪೊಲೀಸ್ ಠಾಣೆಯ ಆವರಣದಲ್ಲೇ ನಿಲ್ಲಿಸಿದ್ದ ಬೈಕ್ನ್ನು ಕಳ್ಳರು ಕದ್ದೊಯ್ದ ಘಟನೆ ಚಾಮರಾಜನಗರದ ಸತ್ತಿ ರಸ್ತೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಪೊಲೀಸ್ ಠಾಣೆ ಆವರಣದಲ್ಲೇ ನಿಲ್ಲಿಸಿದ್ದ ಬೈಕ್ ಕಳುವಾಗಿದ್ದ ಬಗ್ಗೆ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಎಂಬುವವರು ಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು, ಠಾಣೆಯ ಸಿಸಿ ಟಿವಿ ಕ್ಯಾಮರಾ ಪರಿಶೀಲಿಸಿದ್ದಾರೆ.
ಈ ವೇಳೆ ಇಬ್ಬರು ಖದೀಮರು ಕಾಂಪೌಂಡ್ನಿಂದ ಜಿಗಿದು, ಗೇಟ್ ಬೀಗವನ್ನು ರಾಡ್ನಿಂದ ಜಿಗಿದು ಬೈಕ್ ಕಳ್ಳತನ ಮಾಡಿದ್ದರು.
ಸಿಸಿ ಟಿವಿ ಕ್ಯಾಮರಾದ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳಾದ ಇರ್ಫಾನ್ ಚೋಟು ಹಾಗೂ ಅರ್ಫಾಝ್ ಖಾನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್ ತಯಾರಿಕ ಘಟಕ ಮತ್ತು ಡ್ರಗ್ಸ್ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…
ಮೈಸೂರು : ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…
ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…
ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…
ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…
ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…