ಚಾಮರಾಜನಗರ: ಇಲ್ಲಿನ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಪ್ಲ್ಯಾನ್ ಸಕ್ಸಸ್ ಆಗಿದ್ದು, ಗೆಲುವಿನ ಹೊಸ್ತಿನಲ್ಲಿದ್ದ ಕಾಂಗ್ರೆಸ್ ಮುಗ್ಗರಿಸಿ ಬಿದ್ದಿದೆ.
31 ಸದಸ್ಯರ ಬಲದ ನಗರಸಭೆಯಲ್ಲಿ ಕಾಂಗ್ರೆಸ್ನ ಮೂವರು ಸದಸ್ಯರು ಗೈರಾಗಿದ್ದರು. ಪರಿಣಾಮ ಅನಾಯಾಸವಾಗಿ ಬಿಜೆಪಿ 2ನೇ ಬಾರಿಗೆ ಗದ್ದುಗೆ ಏರಿದೆ.
ಬಿಜೆಪಿಯ ಸುರೇಶ್ ನಾಯಕ್ ಆಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಮಮತಾ ಬಾಲಸುಬ್ರಹ್ಮಣ್ಯ ಆಯ್ಕೆಯಾಗಿದ್ದಾರೆ.
ನಗರಸಭೆಯ 31 ಸದಸ್ಯರು ಹಾಗೂ ಸಂಸದ, ಶಾಸಕರ ಬಲದೊಂದಿಗೆ 33 ಸದಸ್ಯರ ಬಲವನ್ನು ಹೊಂದಿತ್ತು. ಓರ್ವ ಬಿಎಸ್ಪಿ ಸದಸ್ಯ ಹೆಚ್ಚು ಸಭೆಗೆ ಗೈರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸದಸ್ಯತ್ವ ರದ್ದುಗೊಳಿಸಿದ್ದರು.
ಬಿಜೆಪಿಯ ಸುರೇಶ್ ಹಾಗೂ ಮಮತಾ 15 ಮತಗಳನ್ನು ಪಡೆದು ಅಧ್ಯಕ್ಷ-ಉಪಾಧ್ಯಕ್ಷರಾಗಿದ್ದಾರೆ. ಮೂವರು ಕಾಂಗ್ರೆಸ್ ಸದಸ್ಯರು ಕೂಡ ಸಭೆಗೆ ಆಗಮಿಸಿ ಬಿಜೆಪಿ ಪರವಾಗಿ ಕೈ ಎತ್ತಿದರು.
ಪರಿಣಾಮ ಚಾಮರಾಜನಗರ ನಗರಸಭೆ ಬಿಜೆಪಿ ಪಾಲಾಗಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಪ್ಲ್ಯಾನ್ ಠುಸ್ ಆಗಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…