ಚಾಮರಾಜನಗರ

ರಕ್ತದಾನ ಪ್ರೋತ್ಸಾಹ ಅತ್ಯವಶ್ಯಕ: ಮಲ್ಲಿಕಾರ್ಜುನ ಸ್ವಾಮಿ

ಹನೂರು: ವಿಶ್ವದಲ್ಲಿಯೇ ಅತಿ ಹೆಚ್ಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ನಮ್ಮ ದೇಶದಲ್ಲಿದ್ದಾರೆ. ಸಮಯಕ್ಕೆ ರಕ್ತ ಸಿಗದ ಕಾರಣ ಪ್ರತಿ ವರ್ಷ ವಿವಿಧ ಕಾಯಿಲೆಗಳಿಂದ ಬಳತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ ಆದ್ದರಿಂದ ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಿದೆ ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಸಾಲೂರು ಬೃಹನ್ ಮಠ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಮತ್ತು ಲಯನ್ಸ್ ಕ್ಲಬ್, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಜಿಲ್ಲಾ ಘಟಕ ಮಹಿಳಾ ಜಿಲ್ಲಾ ಘಟಕದ ಸಂಯುಕ್ತಾಶ್ರಯದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಹೆಚ್ಚಾಗುತ್ತಿದೆ, ಅಪಘಾತಗಳಲ್ಲಿ ಗಾಯಗೊಂಡವರಿಗೆ, ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ, ಮಾರಣಾಂತಿಕ ಕಾಯಿಲೆಗಳಿಂದ ಬಳತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಆದರೆ ಅನೇಕ ಜನರು ರಕ್ತದಾನ ಮಾಡುವುದರಿಂದ ದುರ್ಬಲರಾಗುತ್ತೇವೆ ಎಂದು ಭಾವಿಸುತ್ತಾರೆ . ಆದರೆ ಅದು ತಾತ್ಕಾಲಿಕವಾಗಿ ಮಾತ್ರ ರಕ್ತದಾನ ಮಾಡುವುದರಿಂದ ನಮ್ಮ ದೇಹಕ್ಕೆ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳಿವೆ. ನಾವು ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಬಹುದು, ರಕ್ತದಾನ ಮಾಡುವುದರಿಂದ ಕೇವಲ ಸ್ವೀಕರಿಸಿದವರಿಗೆ ಮಾತ್ರ ಪ್ರಯೋಜನವಾಗುವುದಿಲ್ಲ ರಕ್ತದಾನ ಮಾಡಿದವರಿಗೂ ಹೆಚ್ಚು ಸಹಾಯವಾಗುತ್ತದೆ, ರಕ್ತದಾನ ಮಾಡುವವರಿಗೆ ಒತ್ತಡ ಕಡಿಮೆಯಾಗುತ್ತದೆ ಭಾವನಾತ್ಮಕ ಆರೋಗ್ಯ ಸುಧಾರಣೆಯಾಗುತ್ತದೆ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ರಕ್ತದಾನ ಮಾಡುವುದರಿಂದ ದಾನಿಯ ರಕ್ತದಲ್ಲಿ ಹೊಸ ರಕ್ತ ಉತ್ಪತ್ತಿಯಾಗಲು ಪ್ರಚೋದನೆ ಸಿಗುತ್ತದೆ, ದೇಹದಲ್ಲಿ ಹೊಸ ರಕ್ತ ಚಾಲನೆ ಯಿಂದ ಜ್ಞಾಪಕ ಶಕ್ತಿ ವೃದ್ಧಿಯಾಗುತ್ತದೆ ದೇಹದಲ್ಲಿ ಕೊಬ್ಬಿನ ಅಂಶ ಕಡಿಮೆ ಮಾಡಲು, ಹೃದಯಘಾತವನ್ನು ಶೇಕಡ 80ಕ್ಕಿಂತಲೂ ಜಾಸ್ತಿ ತಡೆಯಲು, ರಕ್ತದ ಒತ್ತಡ ಇತರೆ ಕೆಲವು ರೋಗಗಳನ್ನು ತಡೆಗಟ್ಟಲು ಎಲ್ಲಾಕ್ಕಿಂತ ಮಿಗಿಲಾಗಿ ಒಂದು ಜೀವ ಉಳಿಸಲು ರಕ್ತದಾನ ಅವಶ್ಯಕವಾಗಿದೆ ಎಂದರು.

ಯುವ ಮುಖಂಡ ವಿಶ್ವ ಮಾತನಾಡಿ ಮಲೆ ಮಾದೇಶ್ವರ ಬೆಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ತದಾನ ಶಿಬಿರಕ್ಕೆ ಆಗಮಿಸಿದ್ದ ವೈದ್ಯಾಧಿಕಾರಿಗಳು, ಸಿಬ್ಬಂದಿಗಳಿಗೆ ವಾಸ್ತವ್ಯಕ್ಕೆ ವಸತಿ ವ್ಯವಸ್ಥೆ, ರಕ್ತದಾನ ಮಾಡಿದ ದಾನಿಗಳಿಗೆ ನೇರ ದರ್ಶನ ಸೇರಿದಂತೆ ಎಲ್ಲಾ ರೀತಿಯ ನೆರವು ಕಲ್ಪಿಸುವ ಮೂಲಕ ಪ್ರಾಧಿಕಾರದ ಕಾರ್ಯದರ್ಶಿ ರಘು ರವರು ಸಹಕಾರ ನೀಡಿದ್ದಾರೆ. ಇವರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿದೆ ಎಂದರು.

ರಕ್ತದಾನ ಶಿಬಿರದಲ್ಲಿ 30 ಜನರು ರಕ್ತದಾನ ಮಾಡಿದ್ದಾರೆ.

ಶಿಬಿರದಲ್ಲಿ ಬಸವರಾಜೇಂದ್ರ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಬಸವರಾಜೇಂದ್ರ, ಶ್ವೇತಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್, ನಿರ್ದೇಶಕರುಗಳಾದ ಕೆಎಮ್ ಬಸವರಾಜಪ್ಪ, ಅನುಪಮಾ, ಶೋಭಾ, ನಿರಂಜನ್ ಮೂರ್ತಿ ಹಾಗೂ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೂಡುಮಂಗಳೂರು | ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಅಪಘಾತ : ಸವಾರ ಸಾವು, ಪತ್ನಿ ಗಂಭೀರ

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ,…

12 mins ago

ಸಫಾರಿ ಪುನರಾರಂಭ : ಮೈಸೂರು ಅರಣ್ಯಭವನಕ್ಕೆ ರೈತ ಮುಖಂಡರ ಮುತ್ತಿಗೆ

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ…

26 mins ago

32 ಕ್ಷೇತ್ರಗಳ ಟಾರ್ಗೆಟ್‌: ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ…

2 hours ago

1.60 ಕೋಟಿ ಲಂಚ ಪಡೆದು ಮುಡಾ ಮಾಜಿ ಆಯುಕ್ತ ನಟೇಶ್‌ಗೆ ಬಡ್ತಿ: ದಾಖಲೆ ಬಿಡುಗಡೆ ಮಾಡಿದ ಸ್ನೇಹಮಯಿ ಕೃಷ್ಣ

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ…

2 hours ago

ಫೆಬ್ರವರಿ.25ರಂದು ಅಜ್ಜಿಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ: ಬಡಗಲಪುರ ನಾಗೇಂದ್ರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ…

2 hours ago

ಕ್ರಿಕೆಟ್‌ ಪಂದ್ಯಾವಳಿ ವೇಳೆ ಜೇನುನೊಣಗಳ ದಾಳಿ: ಅಂಪೈರ್‌ ದಾರುಣ ಸಾವು

ಉನ್ನಾವೋ: ಕ್ರಿಕೆಟ್ ಪಂದ್ಯದ ವೇಳೆ ಜೇನುನೊಣಗಳ ಹಿಂಡು ದಾಳಿ ಮಾಡಿದ ಪರಿಣಾಮ 65 ವರ್ಷದ ಅಂಪೈರ್ ಸಾವನ್ನಪ್ಪಿದ್ದು, ಹಲವಾರು ಆಟಗಾರರು…

3 hours ago