ಚಾಮರಾಜನಗರ

ಕೇರಳಕ್ಕೆ ಸಾಗಿಸುತ್ತಿದ್ದ ರಕ್ತಚಂದನ ವಶ ; ಮೂವರ ಬಂಧನ

ಕೊಳ್ಳೇಗಾಲ : ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 101 ಕೆಜಿ ತೂಕದ 8 ರಕ್ತಚಂದನ ತುಂಡುಗಳನ್ನು ಅರಣ್ಯ ಸಂಚಾರ ದಳದವರು ವಶಪಡಿಸಿಕೊಂಡಿದ್ದಾರೆ.

ಟಯೋಟ ಕಾರಿನಲ್ಲಿ (ಕೆ.ಎ 04 ಡಿ.7257) ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ ಕುರಿತು ಸಿಐಡಿ ಅರಣ್ಯ ಸಂಚಾರ ದಳದವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ತಾಲ್ಲೂಕಿನ ಸತ್ತೇಗಾಲ ರಾಷ್ಟ್ರೀಯ ಹೆದ್ದಾರಿ ಉಗನಿಯ ರಸ್ತೆ ಜಂಕ್ಷನ್ ಬಳಿ ತಪಾಸಣೆ ನಡೆಸಿದಾಗ, ಯಾವುದೇ ದಾಖಲಾತಿಗಳು ಇಲ್ಲದೇ ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ತಿಳಿದುಬಂದಿದೆ.

ಈ ವೇಳೆ ಬೆಂಗಳೂರು ಮೂಲದ ಜಯಚಂದ್ರ(49), ಸುಮನ್(28), ಕಾರು ಚಾಲಕ ಹರೀಶ್(36) ಎಂಬವರನ್ನು ಬಂಧಿಸಿ, 8.08 ಲಕ್ಷ ರೂ. ಮೌಲ್ಯದ ರಕ್ತಚಂದನ ಹಾಗೂ ಅದನ್ನು ಸಾಗಿಸಲು ಬಳಸಿದ್ದ ಕಾರನ್ನು ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಸಿಐಡಿ ಅರಣ್ಯ ಸಂಚಾರ ದಳದವರು ಬಂಧಿತರನ್ನು ಬಫರ್ ವಲಯದ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಐಡಿ ಅರಣ್ಯ ಸಂಚಾರ ದಳದ ಆರಕ್ಷಕ ಉಪನಿರೀಕ್ಷಕ ವಿಜಯ್ ರಾಜ್, ಸಿಬ್ಬಂದಿಗಳಾದ ಬಸವರಾಜು, ಸೈಯದ್ ಜಮೀಲ್ ಅಹಮದ್, ರಾಮಚಂದ್ರ, ಲತಾ, ಬಸವರಾಜು, ಚಾಲಕ ಪ್ರಭಾಕರ್ ಭಾಗವಹಿಸಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

9 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

10 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

10 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

11 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

12 hours ago