kollegala
ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.
ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…