ಚಾಮರಾಜನಗರ

ಕೊಳ್ಳೇಗಾಲ | ನದಿಯಿಂದ ಶವ ಹೊರಕ್ಕೆ ; ಸಹಪಾಠಿಗಳ ವಿರುದ್ಧ ಎಫ್‌ಐಎರ್‌

ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

7 mins ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

15 mins ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

23 mins ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

33 mins ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

49 mins ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಈಶ್ವರ್‌ ಖಂಡ್ರೆ ಆಯ್ಕೆ

ಬೆಂಗಳೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ…

1 hour ago