ಚಾಮರಾಜನಗರ

ಕೊಳ್ಳೇಗಾಲ | ನದಿಯಿಂದ ಶವ ಹೊರಕ್ಕೆ ; ಸಹಪಾಠಿಗಳ ವಿರುದ್ಧ ಎಫ್‌ಐಎರ್‌

ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ; ವಾರದಲ್ಲಿ ಅಧಿಸೂಚನೆ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…

9 hours ago

ಇರಾನ್‌ ಅಣ್ವಸ್ತ್ರ ಹೊಂದಲು ಬ್ರಿಟನ್‌ ರಾಜ ಚಾರ್ಲ್‌ ಬಯಸುವುದಿಲ್ಲ : ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…

10 hours ago

ಜಾಮೀನಿಗಾಗಿ ಮತ್ತೆ ಸುಪ್ರೀಂ ಕದ ತಟ್ಟಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ…

12 hours ago

ಚಾ.ನಗರ | ಚಿನ್ನಾಭರಣಕ್ಕಾಗಿ ಮದುವೆ ಮನೆಯಲ್ಲಿ ಮಾರಮಾರಿ ; ಚಾಕು ಇರಿತ

ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…

13 hours ago

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

15 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

16 hours ago