kollegala
ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.
ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.
ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…