ಚಾಮರಾಜನಗರ

ಕೊಳ್ಳೇಗಾಲ | ನದಿಯಿಂದ ಶವ ಹೊರಕ್ಕೆ ; ಸಹಪಾಠಿಗಳ ವಿರುದ್ಧ ಎಫ್‌ಐಎರ್‌

ಕೊಳ್ಳೇಗಾಲ : ನೆನ್ನೆ ತಾಲ್ಲೂಕಿನ ಶಿವನಸಮುದ್ರ – ದರ್ಗಾದ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿದ್ದ ದಯಾನಂದ ಸಾಗರ್ ಕಾಲೇಜು ವೈದ್ಯಕೀಯ ವಿದ್ಯಾರ್ಥಿ ನಂದನ್ ಗೌಡ(19) ಶವವನ್ನು ಅಗ್ನಿಶಾಮಕ ದಳದವರು ಹಾಗೂ ನುರಿತ ಈಜುಪಟುಗಳು ನದಿಯಿಂದ ಹೊರತೆಗೆದಿದ್ದಾರೆ.

ಈ ಸಂಬಂಧ ಮೃತ್ತನ ತಂದೆ ರಾಮನಗರ ಜಿಲ್ಲೆಯ ಹಾರೋಹಳ್ಳಿ ಪಟ್ಟಣದ ವಾಸಿ ಹಾಗೂ ಬೆಂಗಳೂರು ಹಾಲು ಒಕ್ಕೂಟದ ಮ್ಯಾನೇಜಿಂಗ್ ಡೈರೆಕ್ಟರ್ ಶಿವಶಂಕರ್ ದೂರು ಸಲ್ಲಿಸಿ ನನ್ನ ಮಗ ಈಜಲು ಹೋಗಿ ಸತ್ತಿಲ್ಲ, ಬಲಾತ್ಕಾರವಾಗಿ ಇವನನ್ನು ಕರೆದುಕೊಂಡು ಹೋಗಿ ರ್ಯಾಗಿಂಗ್ ಮಾಡಿ ಸಾಯಿಸಿದ್ದಾರೆ. ಈ ಕಾರಣಕ್ಕಾಗಿ ನನ್ನ ಮಗನನ್ನು ಬಲಾತ್ಕಾರವಾಗಿ ಕರೆದುಕೊಂಡು ಬಂದು ಬಟ್ಟೆ ಬಿಚ್ಚಿಸಿ ರ್ಯಾಗಿಂಗ್ ಮಾಡಿ ಸಾವಿಗೆ ಕಾರಣ ಆರು ಮಂದಿ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಲಿಖಿತ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಗ್ರಾಮಾಂತರ ಪೊಲೀಸ್ ಠಾಣೆಯವರು ಈಬಗ್ಗೆ ತನಿಖೆ ನಡೆಸುತ್ತಿದ್ದು ದೂರಿನಲ್ಲಿ ತಿಳಿಸಿರುವಂತೆ ಆರೋಪ ಸಾಬೀತಾದರೆ ಆರೋಪಿಗಳನ್ನು ಬಂಧಿಸುವ ಸಾಧ್ಯತೆ ಇದೆ.
ಚಾ.ನಗರ ಜಿಲ್ಲಾಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಶಾಂತಿನಗರ ತನ್ಮಯ್, ಬೆಂಗಳೂರು ಅಮೃತಹಳ್ಳಿ ತುಷಾರ್, ಶಿವಮೊಗ್ಗ ಪವನ್, ಬೆಂಗಳೂರು ವಿಜಯನಗರ ಪ್ರಫುಲ್, ಬೆಂಗಳೂರು ರಜತ್ , ಕೊಡಗು ಸೋಮವಾರಪೇಟೆಯ ಚತುರ್ ಇವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಲ್ಲಿ ಇವರ ಮೇಲೆ ಆರೋಪ ಮೇಲ್ನೋಟಕ್ಕೆ ಸಾಬೀತಾದರೆ ಇವರು ಬಂಧಿಸುವ ಸಾಧ್ಯತೆ ಇದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago