car accident
ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ಹೊರವಲಯದ ತಮಿಳುನಾಡು ಮುಖ್ಯರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೊಲೊರೊ ವಾಹನವೊಂದು ಪಲ್ಟಿಯಾಗಿರುವ ಘಟನೆ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯ ನಾಲ್ವರು ಭಕ್ತರು ತಮ್ಮ ಕುಟುಂಬ ಸಮೇತ ಮಹದೇಶ್ವರ ಬೆಟ್ಟಕ್ಕೆ ಬಂದು ಪೂಜೆ ನೆರವೇರಿಸಿ, ಪೂಜೆಯ ಬಳಿಕ ವಾಪಸ್ ಹೋಗುತ್ತಿರುವ ವೇಳೆ, ಮೇಟೂರು ಮುಖ್ಯರಸ್ತೆಯಲ್ಲಿ ವಾಹನದ ಚಾಲಕನ ನಿಯಂತ್ರಣ ತಪ್ಪಿ ಬೋಲೊರೊ ಪಲ್ಟಿಯಾಗಿ ಬಿದ್ದಿದೆ.
ಅಪಘಾತದ ವೇಳೆ ವಾಹನದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ದಾರಿಹೋಕರ ಸಹಕಾರದಿಂದ ಗಾಯಾಳುಗಳನ್ನು ಮೆಟ್ಟೂರು ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಘಟನೆಯಲ್ಲಿ ಪ್ರಾಣಹಾನಿಯಾಗಿಲ್ಲ. ಘಟನೆಯ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…
ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…
ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…
ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…
ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…