ಚಾಮರಾಜನಗರ

ನಾಗಮಲೆಗೆ ತೆರಳಲು ಅರಣ್ಯ ಇಲಾಖೆ ವೆಬ್‌ಸೈಟ್‌ನಲ್ಲಿ ನೋಂದಣಿ ಪ್ರಾರಂಭ

ಹನೂರು: ತಾಲೂಕಿನ ಪ್ರಸಿದ್ಧ ಚಾರಣ ಪ್ರದೇಶ ನಾಗಮಲೆಗೆ ತೆರಳಲು ಇಚ್ಛಿಸುವ ಚಾರಣ ಪ್ರಿಯರಿಗೆ ಅರಣ್ಯ ಇಲಾಖೆ ಸಂತಸದ ಸುದ್ದಿಯೊಂದನ್ನು ನೀಡಿದೆ.

ಅರಣ್ಯ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಚಾರಣ ತೆರಳಲು ಬುಕಿಂಗ್ ಪ್ರಾರಂಭಿಸಲಾಗಿದ್ದು ಚಾರಣ ಪ್ರಿಯರು ಮತ್ತು ಪ್ರವಾಸಿಗರು ಇದರ ಸದ್ಬಳಕೆ ಮಾಡಿಕೊಳ್ಳಬಹುದಾಗಿದೆ.

ಮಹದೇಶ್ವರ ಬೆಟ್ಟಕ್ಕೆ ಬರುವಂತಹ ಬಹುತೇಕ ಪ್ರವಾಸಿಗರು ನಾಗಮಲೆಗೆ ಹೋಗಿ ಬರುವುದು ಸಂಪ್ರದಾಯವಾಗಿತ್ತು. ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ಸೇರಿದಂತೆ ಇನ್ನಿತರ ದಿನಗಳಲ್ಲಿ ಭಕ್ತಾದಿಗಳು ದಿನದ 24 ಗಂಟೆಯೂ ನಾಗಮಲೆಗೆ ಹೋಗಿ ಬರುತ್ತಿದ್ದರು.

ಆದರೆ ನಾಗಮಲೆಗೆ ಹೋಗುವಾಗ ಹಾಗೂ ಬರುವಾಗ ಕಾಡು ಪ್ರಾಣಿಗಳು ದಾಳಿ ನಡೆಸಿದ ಪರಿಣಾಮ ಕೆಲ ಪ್ರವಾಸಿಗರು ಮೃತಪಟ್ಟಿದ್ದರಿಂದ ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಇದರ ಅನ್ವಯ ಫೆಬ್ರವರಿ ಐದರಿಂದ ನಾಗಮಲೆಗೆ ಜೀಪ್ ಮುಖಾಂತರ ಹಾಗೂ ಪಾದಯಾತ್ರೆಯ ಮೂಲಕ ಪ್ರವಾಸಿಗರು ತೆರಳುವುದಕ್ಕೆ ನಿರ್ಬಂಧ ವಿಧಿಸಲಾಗಿತ್ತು.

ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ ,ತುಳಸಿ ಕರೆ ಗ್ರಾಮದ ಹಲವು ಯುವಕರು ಜೀಪ್ ಸಂಚಾರವನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿದ್ದರು. ನಿರ್ಬಂಧ ವಿಧಿಸಿದ್ದ ಹಿನ್ನೆಲೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಗ್ರಾಮದ ಜನತೆ ರೊಚ್ಚಿಗೆದ್ದು ಮತಯಂತ್ರವನ್ನು ಧ್ವಂಸಗೊಳಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ 50ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲಾಗಿ ಶಿಕ್ಷೆ ಅನುಭವಿಸಿ ಗ್ರಾಮಕ್ಕೆ ವಾಪಸ್ ತೆರಳಿದ್ದಾರೆ.

ಅಕ್ಟೋಬರ್ ೬ರಿಂದ ನಾಗಮಲೆಗೆ ಚಾರಣ ತೆರಳಲು ಅರಣ್ಯ ಇಲಾಖೆಯ ವೆಬ್ ಸೆಟ್ www.aranyavihaara.karanataka.gov.inಗೆ ಭೇಟಿ ನೀಡಿ ನೋಂದಾಯಿಸಿಕೊಂಡು ನಂತರ ದಿನಾಂಕ ನಮೂದಿಸಿ ಮಾಡಿಕೊಳ್ಳಲು ಅವಕಾಶ ನೀಡಿದೆ. ಭಕ್ತಾದಿಗಳಿಗೆ ಹಾಗೂ ಚಾರಿಣಿಕರಿಗೆ ಬೆಳಗ್ಗೆ ೬ ರಿಂದ ೧೦ ಗಂಟೆಯ ಸ್ಲಾಟನ್ನು ಬುಕಿಂಗ್ ಅವಕಾಶ ನೀಡಲಾಗಿದ್ದು. ಒಬ್ಬರಿಗೆ 200 ರೂ ನಿಗದಿ ಮಾಡಲಾಗಿದ್ದು ಜಿಎಸ್‌ಟಿ ಸಹ ಸೇರಿಕೊಳ್ಳಲಿದೆ. ಚಾರಣ ಪಥವು ಸುಮಾರು 14 ಕಿಲೋಮೀಟರ್ ಗಳಿದ್ದು ಹಳೆಯೂರು ಗೇಟ್ ನಿಂದ ಪ್ರಾರಂಭಿಸಿ ನಾಗಮಲೆ ತಲುಪಿ ಮತ್ತೆ ವಾಪಸ್ ಹಳೆಯೂರು ಗೇಟ್ ನಲ್ಲಿ ಚಾರಣವು ಮುಕ್ತಾಯಗೊಳ್ಳಲಿದೆ. ಚಾರಣಿಗರ ಜೊತೆಗೆ ಅರಣ್ಯ ಇಲಾಖೆಯ ಒಬ್ಬರು ಜೊತೆ ಇದ್ದು ಮಾಹಿತಿ ಒದಗಿಸಲಿದ್ದಾರೆ.

ಅರಣ್ಯ ಇಲಾಖೆಯು ಪ್ರಾಯೋಗಿಕವಾಗಿ ಒಂದು ದಿನಕ್ಕೆ 200 ಜನರಿಗೆ ಚಾರಣಕ್ಕೆ ಅವಕಾಶ ಕಲ್ಪಿಸಲಾಗಿದ್ದು ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಜನರಿಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದ್ದಾರೆ. ಇದಲ್ಲದೆ ಅರಣ್ಯ ಸಚಿವರ ನಿರ್ದೇಶನದ ಮೇರೆಗೆ ಏಕ ಬಳಕೆಯ ಪ್ಲಾಸ್ಟಿಕನ್ನು ವನ್ಯ ಧಾಮದಲ್ಲಿ ನಿಷೇಧಿಸಲಾಗಿರುವುದರಿಂದ ಬರುವ ಪ್ರವಾಸಿಗರು ಅರಣ್ಯ ಇಲಾಖೆಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.

ಇನ್ನು ಇಂಡಿಗನತ್ರ ಗ್ರಾಮದಲ್ಲಿರುವ ಜೀಪ್‌ಗಳಿಗೆ ವಿಮೆ, ಸಂಚಾರಕ್ಕೆ ಯೋಗ್ಯವಿಲ್ಲದೆ ಇರುವುದರಿಂದ ಪ್ರವಾಸಿಗರನ್ನು ಕರೆದುಕೊಂಡು ಹೋಗುವುದಕ್ಕೆ ನಿರ್ಬಂಧ ಮುಂದುವರಿಸಲಾಗಿದೆ.

ಪ್ರವಾಸಿಗರಿಗೆ ಯಾವುದಾದರೂ ತೊಡಕು ಉಂಟಾದರೆ ಅಥವಾ ಅನುಮಾನವಿದ್ದಲ್ಲಿ ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿ ವಲಯ ವಲಯ ಅರಣ್ಯಾಧಿಕಾರಿ 9481995510, ಡಿ ಆರ್ ಎಫ್ 9481995527, ಪಾಲಾರ್ ಆರ್ ಎಫ್ 9481995512, ಡಿ ಆರ್ ಎಫ್ ಓ 9481995531, ಗಸ್ತು ಅರಣ್ಯಪಾಲಕ ಇಂಡಿಗನತ್ತ 9481995597 ಸಂಖ್ಯೆಗೆ ದೂರವಾಣಿ ಮುಖಾಂತರ ಸಂಪರ್ಕಿಸಬಹುದೆಂದು ತಿಳಿಸಲಾಗಿದೆ.

ಮಲೆ ಮಹದೇಶ್ವರ ವನ್ಯಜೀವಿ ವ್ಯಾಪ್ತಿಯಲ್ಲಿ ಬರುವ ಶ್ರೀ ನಾಗಮಲೆಗೆ ಕಳೆದ ಏಳು ತಿಂಗಳನಿಂದ ಜೀಪ್ ಹಾಗೂ ಪಾದಯಾತ್ರೆಯ ಮೂಲಕ ಭಕ್ತಾದಿಗಳು ತೆರಳಲು ನಿರ್ಬಂಧ ವಿಧಿಸಲಾಗಿತ್ತು. ಇದೀಗ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಚಾರಣ ತೆರಳಲು ವೆಬ್ ಸೆಟ್ ನಲ್ಲಿ ನೋಂದಾವಣೆ ಮಾಡಿಕೊಂಡು ಪ್ರತಿದಿನ 200 ಚಾರಣಿಕರು ಹೋಗಲು ಅವಕಾಶ ಮಾಡಿಕೊಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ವನ್ಯ ಪ್ರಾಣಿಗಳಿಗೆ ತೊಂದರೆಯಾಗದಂತೆ ಚಾರಣಿಕರು ಹಾಗೂ ಪ್ರವಾಸಿಗರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವದು.
– ಡಾ.ಸಂತೋಷ್ ಕುಮಾರ್
ಡಿಪಿಎಫ್ ಮಲೆ ಮಹದೇಶ್ವರ ವನ್ಯಜೀವಿ ಧಾಮ

 

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

8 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago