Mysore
28
clear sky

Social Media

ಬುಧವಾರ, 11 ಫೆಬ್ರವರಿ 2026
Light
Dark

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಪ್ರವೇಶವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸಿದೆ.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಇಲ್ಲಿನ ರಸ್ತೆಗಳು ಕಿರಿದಾಗಿದ್ದು, ಅರಣ್ಯ ಪ್ರದೇಶದ ಮಾರ್ಗವಾಗಿರುವುದರಿಂದ ಟ್ರಾಫಿಕ್‌ ಸಮಸ್ಯೆ ತಪ್ಪಿಸಲು ಮತ್ತು ಭಕ್ತರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ.13ರಿಂದ ಫೆಬ್ರವರಿ.18ರವರೆಗೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಪ್ರವೇಶವನ್ನು ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿಷೇಧಿಸಿದೆ.

ಬೆಟ್ಟಕ್ಕೆ ತೆರಳುವ ಭಕ್ತರು ಈ ಅವಧಿಯಲ್ಲಿ ಪರ್ಯಾಯ ಸಾರಿಗೆ ವ್ಯವಸ್ಥೆ ಅಥವಾ ಬಸ್‌ಗಳನ್ನು ಬಳಸುವಂತೆ ಸೂಚನೆ ನೀಡಲಾಗಿದೆ.

Tags:
error: Content is protected !!