ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ.
ಈ ಬಾರಿ ವಾಸ್ತವ್ಯದ ಜೊತೆಗೆ ಸಫಾರಿಗೂ ಕೂಡ ಬ್ರೇಕ್ ಬಿದ್ದಿದ್ದು, ವನ್ಯಜೀವಿ ಪ್ರಿಯರಿಗೆ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುವುದಿಲ್ಲ.
ಹೊಸ ವರ್ಷಾಚರಣೆ ನೆಪದಲ್ಲಿ ಬಂಡೀಪುರ ಅರಣ್ಯದಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿ ಮೋಜು ಮಸ್ತಿ ಮಾಡಿ ಕಾಡಿನಲ್ಲಿರುವ ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವರ್ಷದ ಕೊನೆಯ ದಿನ ಹಾಗೂ ಹೊಸ ವರ್ಷದ ಮೊದಲ ದಿನ ಬಂಡೀಪುರದ ಅರಣ್ಯ ಇಲಾಖೆ ಕಾಟೇಜ್ಗಳಲ್ಲೂ ವಾಸ್ತವ್ಯಕ್ಕೆ ಬ್ರೇಕ್ ಹಾಕಲಾಗಿದೆ. ಇದರಿಂದಾಗಿ ಈ ಬಾರಿಯೂ ಕೂಡ ಬಂಡೀಪುರದಲ್ಲಿ ಹೊಸ ವರ್ಷ ಆಚರಣೆ ಮೋಜು-ಮಸ್ತಿಗೆ ಪ್ಲಾನ್ ಮಾಡಿದ್ದ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ.
ಕೃಷ್ಣ ಸಿದ್ದಾಪುರ ಅಣಬೆ ಕೃಷಿ ಗೃಹಿಣಿಯರಿಗೆ ಆದಾಯ ತರುವ ಉದ್ಯಮ ಸಿದ್ದಾಪುರ: ಕೊಡಗು ಜಿಲ್ಲೆಯಲ್ಲಿ ಅಣಬೆ ಕೃಷಿಗೆ ವಿಪುಲ ಅವಕಾಶಗಳಿದ್ದು,…
ʼರಾಮು ಅವರ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿ ಬಿಡುಗಡೆ ಮಾಡಿದ ಚ.ಹ.ರಘುನಾಥ ಅಭಿಮತ ಮೈಸೂರು: ಸಾವಿರಾರು ವರ್ಷಗಳ ಹಿಂದಿನ ಮಹಾಭಾರತವನ್ನು ಸಮಕಾಲೀನ…
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…