ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ.
ಈ ಬಾರಿ ವಾಸ್ತವ್ಯದ ಜೊತೆಗೆ ಸಫಾರಿಗೂ ಕೂಡ ಬ್ರೇಕ್ ಬಿದ್ದಿದ್ದು, ವನ್ಯಜೀವಿ ಪ್ರಿಯರಿಗೆ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗುವುದಿಲ್ಲ.
ಹೊಸ ವರ್ಷಾಚರಣೆ ನೆಪದಲ್ಲಿ ಬಂಡೀಪುರ ಅರಣ್ಯದಲ್ಲಿ ಪ್ರವಾಸಿಗರು ವಾಸ್ತವ್ಯ ಹೂಡಿ ಮೋಜು ಮಸ್ತಿ ಮಾಡಿ ಕಾಡಿನಲ್ಲಿರುವ ಪ್ರಾಣಿಗಳ ಸಹಜ ಜೀವನಕ್ಕೆ ಅಡ್ಡಿಯುಂಟು ಮಾಡುತ್ತಾರೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ವರ್ಷದ ಕೊನೆಯ ದಿನ ಹಾಗೂ ಹೊಸ ವರ್ಷದ ಮೊದಲ ದಿನ ಬಂಡೀಪುರದ ಅರಣ್ಯ ಇಲಾಖೆ ಕಾಟೇಜ್ಗಳಲ್ಲೂ ವಾಸ್ತವ್ಯಕ್ಕೆ ಬ್ರೇಕ್ ಹಾಕಲಾಗಿದೆ. ಇದರಿಂದಾಗಿ ಈ ಬಾರಿಯೂ ಕೂಡ ಬಂಡೀಪುರದಲ್ಲಿ ಹೊಸ ವರ್ಷ ಆಚರಣೆ ಮೋಜು-ಮಸ್ತಿಗೆ ಪ್ಲಾನ್ ಮಾಡಿದ್ದ ಪ್ರವಾಸಿಗರಿಗೆ ನಿರಾಸೆ ಉಂಟಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…