ಕೊಳ್ಳೇಗಾಲ: ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯ ಪೇದೆಯೊಬ್ಬರು ಅಪಘಾತಕ್ಕೆ ಒಳಗಾಗಿದ್ದ ಕಾರು ಬಿಡುಗಡೆಗೆ ಲಂಚ ಸ್ವೀಕರಿಸಿದ ವಿಡಿಯೋ ಸಾವಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಮಂಡ್ಯ ಮೂಲದ ಮನೋಹರ್ ಎಂಬವರ ಕಾರು ಮಾರ್ಚ್.೨೪ ರಂದು ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಬಳಿ ಅಪಘಾತಕ್ಕೆ ಈಡಾಗಿತ್ತು. ಇದನ್ನು ಬಿಡಿಸಿಕೊಳ್ಳಲು ಮಾರ್ಚ್ ೨೭ರಂದು ಕಾರಿನ ಮಾಲೀಕ ಮನೋಹರ್ ಗ್ರಾಮಾಂತರ ಪೊಲೀಸ್ ಠಾಣೆಗೆ ಹೋಗಿದ್ದರು.
ಈ ವೇಳೆ ಪೊಲೀಸ್ ಪೇದೆ ವಿಜಯಕುವಾರ್ ಕಾರು ಬಿಡುಗಡೆಗೆ ಮೊದಲು ೧೦ ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಚೌಕಾಸಿ ನಡೆದ ನಂತರ ೬ ಸಾವಿರ ರೂ. ಪಡೆದು ಕಾರು ಬಿಡುಗಡೆ ಮಾಡಿದ್ದರು.
ಸಬ್ ಇನ್ಸ್ಪೆಕ್ಟರ್ಗೆ ಇದರಲ್ಲಿ ಪಾಲು ನೀಡಬೇಕು. ಕಡಿಮೆ ನೀಡಿದರೆ ಅವರು ಒಪ್ಪಲ್ಲ. ಅವರು ಹೇಳಿದ್ದನ್ನು ನಾನು ನಿಮಗೆ ಹೇಳಿದ್ದೇನೆ ಎನ್ನುವುದು ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಸಂಬಂಧ ಮನೋಹರ್ ಪೊಲೀಸ್ ಕಾನ್ಸ್ಟೇಬಲ್ ವಿಜಯಕುವಾರ್ ವಿರುದ್ಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರಿಗೆ ದೂರು ನೀಡಿ, ಹಣ ವಸೂಲಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ.
ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…
ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್ ಬಳಿಯ ಅರ್ಪೊರಾದ ನೈಟ್ಕ್ಲಬ್ ಬೀರ್ಚ್ ಬೈ ರೋಮಿಯೋ ಲೇನ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…
ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…
ಗೋವಾ: ಇಲ್ಲಿನ ನೈಟ್ ಕ್ಲಬ್ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್…
ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…